Advertisement

ವಾಲ್ಮೀಕಿ ಶ್ರೀ ಹೇಳಿದರೆ ರಾಜೀನಾಮೆ ನೀಡಲು ಸಿದ್ಧ: ರಾಜುಗೌಡ

08:38 PM Nov 04, 2019 | Sriram |

ಯಾದಗಿರಿ:ಎಸ್ಟಿ ಸಮುದಾಯಕ್ಕೆ 7.5 ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಪೀಠದ ಸ್ವಾಮೀಜಿ ಹೇಳಿದರೆ ರಾಜೀನಾಮೆ ನೀಡಲು ಸಿದ್ಧ ಎಂದು ಶಾಸಕ ನರಸಿಂಹ ನಾಯಕ (ರಾಜುಗೌಡ) ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಮೀಸಲಾತಿಗಾಗಿ ಮೊದಲಿನಿಂದಲೂ ಹೋರಾಟ ನಡೆಯುತ್ತಿದೆ. ನಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಸ್ವಾಮೀಜಿ ಹೋರಾಟಕ್ಕೆ ಮುಂದಾಗುವಂತೆ ಸೂಚಿಸಿದರೆ ಅದಕ್ಕೂ ಸಿದ್ಧ. ಹಿಂದೆ ಸಮ್ಮಿಶ್ರ ಸರ್ಕಾರದಲ್ಲಿಯೂ ಬೇಡಿಕೆ ಇತ್ತು. ಈಗ ನಮ್ಮ ಸರ್ಕಾರವಿದ್ದರೂ ನಾವು ಮಾತು ತಪ್ಪಲ್ಲ, ನಮ್ಮ ಸರ್ಕಾರ ಮೀಸಲಾತಿ ನೀಡುವ ಭರವಸೆಯಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next