Advertisement

ವಾಲ್ಮೀಕಿ ಜಾತ್ರಾ ಮಹೋತ್ಸವ

11:19 AM Feb 07, 2019 | Team Udayavani |

ಅರಸೀಕೆರೆ: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನಲ್ಲಿರುವ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಫೆ.8, 9ರಂದು ನಡೆಯುತ್ತಿರುವ ವಾಲ್ಮೀಕಿ ಜಾತ್ರಾ ಮಹೋತ್ಸವ ತಾಲೂಕಿನ ಪೀಠಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ತಾಲೂಕು ವಾಲ್ಮೀಕಿ ಮಹಾಸಭಾ ಅಧ್ಯಕ್ಷ ಟಿ.ಜಿ. ಬಸವರಾಜ್‌ ವಿನಂತಿಸಿದ್ದಾರೆ. ಜಾತ್ರಾ ಮಹೋತ್ಸವದ ಅಂಗ ವಾಗಿ ಶ್ರೀಮಠದ ಆವರಣದಲ್ಲಿ 21ನೇ ವಾರ್ಷಿಕೋತ್ಸವ, ಲಿಂಗೈಕ್ಯ ಶ್ರೀ ಪುಣ್ಯಾನಂದಪುರಿ ಶ್ರೀಗಳ 12ನೇ ವರ್ಷದ ಪುಣ್ಯ ಸಂಸ್ಮರಣೆ ಹಾಗೂ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಶ್ರೀಗಳ 11ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ಜರುಗಲಿದೆ. ಅಂದು ಧಾರ್ಮಿಕ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಹರಗುರು ಚರಮೂರ್ತಿಗಳು ಪಾಲ್ಗೊಳ್ಳುತ್ತಿರುವ ಕಾರಣ ತಾಲೂಕಿನ ಶ್ರೀಮಠದ ಪೀಠಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಇಂದು ಮಾರಮ್ಮ ವಿಗ್ರಹ ಪ್ರತಿಷ್ಠಾಪನೆ, ಕುಂಭಾಭಿಷೇಕ

Advertisement
Advertisement

Udayavani is now on Telegram. Click here to join our channel and stay updated with the latest news.

Next