Advertisement

Valmiki Scam; ನಾಗೇಂದ್ರ ಮಾತ್ರವಲ್ಲ, ಇನ್ನೂ ದೊಡ್ಡವರಿದ್ದಾರೆ: ವಿಜಯೇಂದ್ರ

11:45 PM Jul 11, 2024 | Team Udayavani |

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರದಲ್ಲಿ ಕೇವಲ ಮಾಜಿ ಸಚಿವ ನಾಗೇಂದ್ರ ಮಾತ್ರವಲ್ಲ, ಇನ್ನೂ ದೊಡ್ಡ ದೊಡ್ಡವರ ಹೆಸರು ಹೊರಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೊಸ ಬಾಂಬ್‌ ಸಿಡಿಸಿದ್ದಾರೆ.

Advertisement

ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರ ಜತೆಗೆ ಮಾತನಾಡಿ ಈ ಅಕ್ರಮದ ಬಗ್ಗೆ ಇ.ಡಿ. ತನಿಖೆ ನಡೆಸುತ್ತಿರುವುದನ್ನು ಬಲವಾಗಿ ಸಮರ್ಥಿಸಿಕೊಂಡರು. ಈ ಪ್ರಕರಣದಲ್ಲಿ ಕೇವಲ ನಾಗೇಂದ್ರ ಪಾತ್ರ ಮಾತ್ರವಿಲ್ಲ. ಸ್ವಲ್ಪ ದಿನ ಕಾಯುತ್ತಿರಿ, ಇನ್ನೂ ದೊಡ್ಡ ದೊಡ್ಡವರ ಹೆಸರೇ ಆಚೆ ಬರುತ್ತದೆ ಎಂದರು.

ದಲಿತರಿಗೆ ಮೀಸಲಿಟ್ಟ 12 ಸಾವಿರ ಕೋಟಿ ಹಣವನ್ನು ಕಳೆದ ವರ್ಷ ಸಿದ್ದರಾಮಯ್ಯನವರು ಗ್ಯಾರಂಟಿಗೆ ವರ್ಗಾವಣೆ ಮಾಡಿಕೊಂಡಿದ್ದರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next