Advertisement

ಪುಣೆ-ಬೆಳಗಾವಿ ನಡುವೆ ವಂದೇ ಭಾರತ ರೈಲು 15ರಿಂದ: ಜಗದೀಶ ಶೆಟ್ಟರ್

05:18 PM Sep 11, 2024 | Team Udayavani |

ಉದಯವಾಣಿ ಸಮಾಚಾರ
ಬೆಳಗಾವಿ: ಜಿಲ್ಲೆಯ ಜನರ ಬಹಳ ದಿನಗಳ ಬೇಡಿಕೆಯಾಗಿದ್ದ ಪುಣೆ  -ಬೆಳಗಾವಿ-ಹುಬ್ಬಳ್ಳಿ ನಡುವೆ ಅತಿ ವೇಗದ ವಂದೇ ಭಾರತ್‌ ರೈಲು ಸಂಚಾರಕ್ಕೆ ರೈಲ್ವೆ ಸಚಿವರು ಹಸಿರು ನಿಶಾನೆ ನೀಡಿರುವುದು ಅತ್ಯಂತ ಸಂತಸದ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದರಾದ ಜಗದೀಶ ಶೆಟ್ಟರ್ ಹೇಳಿದ್ದಾರೆ.

Advertisement

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು ಬೆಳಗಾವಿ – ಪುಣೆ ನಡುವೆ ವಂದೇ ಭಾರತ್‌ ನೂತನ ರೈಲು ಸಂಪರ್ಕಕ್ಕೆ ದೆಹಲಿಯಲ್ಲಿ ರೈಲ್ವೆ ಸಚಿವರಾದ ಅಶ್ವಿ‌ನಿ ವೈಷ್ಣವ್‌ ಮತ್ತು ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿತ್ತು. ಅದು ಹುಬ್ಬಳ್ಳಿಯವರೆಗೆ  ವಿಸ್ತರಣೆಯಾಗಿದ್ದು ಇದರಿಂದ ನಮ್ಮ ಬೇಡಿಕೆ ಈಡೇರಿದಂತಾಗಿದೆ ಎಂದಿದ್ದಾರೆ.

ಬೆಳಗಾವಿ – ಪುಣೆ ನಡುವಿನ ವಂದೇ ಭಾರತ್‌ ನೂತನ ರೈಲು ಸಂಚಾರ ಸೆ. 15 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿದೆ. ಅದೇ ರೀತಿ ಬೆಂಗಳೂರು – ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ ವಂದೇ ಭಾರತ್‌ ರೈಲು ಕೂಡ ಬೆಳಗಾವಿ ನಗರದವರೆಗೂ ವಿಸ್ತರಿಸುವ ಬಗ್ಗೆಯೂ ಸಹ ಕೇಂದ್ರ ರೈಲ್ವೆ ಸಚಿವರ ಜೊತೆಗೆ ಈಗಾಗಲೇ
ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next