Advertisement

ವಾಣಿ ಪ.ಪೂ. ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

03:45 AM Jul 04, 2017 | Karthik A |

ಬೆಳ್ತಂಗಡಿ : ಬಾಲ್ಯದಲ್ಲಿ ಸಿಗುವ ಉತ್ತಮ ಅವಕಾಶ ಸದುಪಯೋಗಿಸಿಕೊಂಡಾಗ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ ಬಳೆಂಜ ಹೇಳಿದರು. ಅವರು ವಾಣಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ರಚನೆಗೊಂಡ ‘ಅಕ್ಷರವಾಣಿ’ ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಿ ಮಾತನಾಡಿ ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಸಾಹಿತ್ಯದ ಒಲವನ್ನು ಬೆಳೆಸಿಕೊಂಡಾಗ ಉತ್ತಮ ಬರಹಗಾರರಾಗಲು ಸಾಧ್ಯ ಎಂದರು.

Advertisement

ಕಾಲೇಜಿನ ಪ್ರಾಂಶುಪಾಲ ಡಿ.ಯದುಪತಿ ಗೌಡ ಅಧ್ಯಕ್ಷತೆ  ವಹಿಸಿ, ವಿದ್ಯಾರ್ಥಿಗಳ ಸೃಜನಶೀಲತೆಗೆ ಪೂರಕವಾಗಿ ಭಿತ್ತಿಪತ್ರಿಕೆಗಳು ರಚಿಸಲ್ಪಟ್ಟಿದ್ದು, ಇದರಲ್ಲಿ ಸಾಹಿತ್ಯದ ಎಲ್ಲ ಪ್ರಕಾರಗಳ ಬಳಕೆ ಕಂಡು ಬರುತ್ತದೆ.ಅಲ್ಪ ಸ್ವಲ್ಪ ವಿಷಯಗಳನ್ನು ಸಂಗ್ರಹಿಸಿ ಬರವಣಿಗೆಯಲ್ಲಿ ತೊಡಗಿಸಿಕೊಂಡು ಮುಂದಕ್ಕೆ ಸ್ವತಂತ್ರ ಬರಹಗಾರರಾಗಬಹುದು. ಗ್ರಹಿಸುವ ಶಕ್ತಿ ಮತ್ತು ಬರವಣಿಗೆಯ ಶೈಲಿಯಿಂದ ಉತ್ತಮ ಲೇಖಕರಾಗಬಹುದು ಎಂದರು. ಕಾಲೇಜಿನ ಉಪಪ್ರಾಂಶುಪಾಲ ವಿಷ್ಣುಪ್ರಕಾಶ್‌ ಉಪಸ್ಥಿತರಿದ್ದರು. ಅಕ್ಷರವಾಣಿ ಭಿತ್ತಿಪತ್ರಿಕೆಯ ಸಂಯೋಜಕಿ ಕಿಶೋರಿ ಎಸ್‌. ರಾವ್‌ ಸ್ವಾಗತಿಸಿದರು. ಸೌಮ್ಯಾ ವಂದಿಸಿದರು. ಸೀಮಾ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next