Advertisement

Gyanvapi ಮಸೀದಿ ಕಾರ್ಬನ್ ಡೇಟಿಂಗ್: ತೀರ್ಪು ಕಾಯ್ದಿರಿಸಿದ ಕೋರ್ಟ್

10:54 PM Jul 14, 2023 | Team Udayavani |

ವಾರಾಣಸಿ: ಜ್ಞಾನವಾಪಿ ಮಸೀದಿಯಲ್ಲಿನ ಸಮೀಕ್ಷೆಯ ಭಾಗವಾಗಿ ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತು ತನ್ನ ಆದೇಶವನ್ನು ಜಿಲ್ಲಾ ನ್ಯಾಯಾಲಯವು ಕಾಯ್ದಿರಿಸಿದ್ದು ಜುಲೈ 21 ರಂದು ನ್ಯಾಯಾಲಯ ತನ್ನ ತೀರ್ಪು ಪ್ರಕಟಿಸಲಿದೆ.

Advertisement

ಈ ವರ್ಷದ ಮೇ ತಿಂಗಳಲ್ಲಿ, ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಸಂಪೂರ್ಣ ಜ್ಞಾನವಾಪಿ ಮಸೀದಿ ಆವರಣವನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಸಮೀಕ್ಷೆಗೆ ಕೇಳಲು ನ್ಯಾಯಾಲಯ ಸಮ್ಮತಿಸಿತ್ತು. ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಸ್ವೀಕರಿಸಿತ್ತು.

ವಿಷ್ಣು ಜೈನ್ ಅವರ ಮನವಿಯನ್ನು ಪರಿಗಣಿಸಿದ ನ್ಯಾಯಾಲಯವು ಹಿಂದೂ ಪರವಾಗಿ ಮಾಡಿದ ಸಲ್ಲಿಕೆಗಳಿಗೆ ಉತ್ತರವನ್ನು ಸಲ್ಲಿಸುವಂತೆ ಜ್ಞಾನವಾಪಿ ಮಸೀದಿ ಸಮಿತಿಯನ್ನು ಕೇಳಿದೆ. ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಲಯ ಇದೀಗ ಕಾರ್ಬನ್ ಡೇಟಿಂಗ್ ಕುರಿತ ಆದೇಶವನ್ನು ಕಾಯ್ದಿರಿಸಿದೆ.

ವಾರಾಣಸಿಯ ಜ್ಞಾನವಾಪಿ ಸಂಕೀರ್ಣದ ಆವರಣದಲ್ಲಿರುವ ಶಿವಲಿಂಗದ ವೈಜ್ಞಾನಿಕ ತನಿಖೆ ನಡೆಸುವಂತೆ ಭಾರತೀಯ ಪುರಾತತ್ವ ಇಲಾಖೆಗೆ (ಎಎಸ್‌ಐ) ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಕೆಲವು ದಿನಗಳ ಹಿಂದೆ ಹಿಂದೂ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next