Advertisement
ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾಸರಗೋಡು ಜಿಲ್ಲಾ ಘಟಕ ಮತ್ತು ಪ್ರಗತಿಬಂಧು-ಸ್ವಸಹಾಯ ಸಂಘಗಳ ಒಕ್ಕೂಟ ಪಾವಳ ಪೈವಳಿಕೆ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಭಾನುವಾರ ವರ್ಕಾಡಿಯ ಸೆ„ಂಟ್ ಜೋಸೆಫ್ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಆಟಿಟೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.Related Articles
Advertisement
ಅಖೀಲ ಕರ್ನಾಟಕ ಜನಜಾಗ್ರತಿ ವೇದಿಕೆಯ ಜಿಲ್ಲಾಧ್ಯಕ್ಷ ಅಶ್ವಥ್ ಪೂಜಾರಿ ಲಾಲ್ಬಾಘ…, ವರ್ಕಾಡಿ ಗ್ರಾ.ಪಂ.ಅಧ್ಯಕ್ಷ ಅಬ್ದುಲ್ ಮಜೀದ್, ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕಾಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಯಕ್ಷದ್ರುವ ಪಟ್ಲ ಫೌಂಡೇಶನ್ ಕುಂಬಳೆ ಘಟಕಾಧ್ಯಕ್ಷ ಎಸ್.ಜಗನ್ನಾಥ ಶೆಟ್ಟಿ ಕುಂಬಳೆ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ ಬನದಗದ್ದೆ, ಜನಜಾಗƒತಿ ವೇದಿಕೆಯ ಹರೀಶ್ ಕಡಂಬಾರ್, ಶಂಕರ ಭಂಡಾರಿ, ಜಹೀರ್ ಅಹಮ್ಮದ್ ಬೆಳಪು, ರೋಟರಿ ಕ್ಲಬ್ ಅಧ್ಯಕ್ಷಸುನಿಲ್ ಶಿರ್ವ, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕದ ಎಸ್.ವಿ.ಕರ್ಕೇರ, ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ವಿಶ್ವನಾಥ, ಜಾನಪದ ಪರಿಷತ್ತಿನ ಸಲಹೆಗಾರ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಮೊದಲಾದವರು ಉಪಸ್ಥಿತರಿದ್ದು ಶುಭಹಾರೈಸಿದರು.
ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಟ್ ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಚೇತನಾ ಎಂ.ಸ್ವಾಗತಿಸಿ, ಜಾನಪದ ಪರಿಷತ್ತಿನ ಸಲಹೆಗಾರ ಪ್ರೊ.ಎ.ಶ್ರೀನಾಥ್ ವಂದಿಸಿದರು. ಕೋಶಾಧಿಕಾರಿ ರವಿ ನಾಯ್ಕಪು ಕಾರ್ಯಕ್ರಮ ನಿರೂಪಿಸಿದರು. ಶ್ರೀಕಾಂತ್ ನೆಟ್ಟಣಿಗೆ, ಝಡ್.ಎ.ಕಯ್ನಾರು, ಪುಷ್ಪಾವತಿ ನೆಟ್ಟಣಿಗೆ ಗುತ್ತು, ಸಂಧ್ಯಾಗೀತ ಬಾಯಾರು, ಪೃಥ್ವಿ ಶೆಟ್ಟಿ ಕುಂಬಳೆ, ಗೋವಿಂದ ಭಟ್ ಗಿರಿ ಬಾಯಾರು, ಗಣೇಶ್.ಕೆ.ಬಿ ಮೊದಲಾದವರು ಸಹಕರಿಸಿದರು.
ತೆಂಗಿನ ಹಸಿರು ಗರಿಗಳಿಂದ ವೇದಿಕೆಯನ್ನು ಆಲಂಕರಿಸಿರುವುದು ಸಮಾರಂಭದ ಅಕರ್ಷಣೆಗಳಲ್ಲಿ ಒಂದು ಬಳಿಕ ಸ್ವಸಹಾಯ ಸಂಘಗಳ ಸದಸ್ಯೆಯರಿಂದ ವಿವಿಧ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಿತು.
ಕಳಂಜನ ಆಗಮನ:ಕಾರ್ಯಕ್ರಮದ ಉದ್ಘಾಟನೆಯ ವೇಳೆ ಆಟಿಕಳಂಜ ಆಗಮಿಸಿ ಪಾಡªನ ಕುಣಿತಗಳ ಮೂಲಕ ಸಾಂಪ್ರದಾಯಿಕ ಚಾಲನೆ ನೀಡಲಾಯಿತು.ಬಾಬು ಮೀಯಪದವು ಮತ್ತು ನಾರಾಯಣ ಅವರು ಆಟಿಕಳಂಜ ವೇಷಧಾರಿಯಾಗಿ ವೇದಿಕೆಗೆ ಆಗಮಿಸಿ ಸಾಂಪ್ರದಾಯಿಕವಾಗಿ ಡೋಲು ಬಡಿದು ಕುಣಿಸಲಾಯಿತು. ಈ ಸಂದರ್ಭ ಬಾಲಕೃಷ್ಣ ನಾಯ್ಕ-ಗೀತಾ ದಂಪತಿಗಳು ಗೆರಸೆಯಲ್ಲಿ ಆಟಿಯ ತಿಂಡಿ-ಪದಾರ್ಥಗಳನ್ನು ನೀಡಿ ಆಟಿಕಳಂಜನನ್ನು ಬೀಳ್ಕೊಟ್ಟರು. 107 ಬಗೆಯ ಆಟಿ ತಿನಸುಗಳು:
ಕಾರ್ಯಕ್ರಮದಲ್ಲಿ ಯೋಜನೆಯ ಸ್ವಸಹಾಯ ಸಂಘಗಳು ತಯಾರಿಸಿದ 107 ಬಗೆಯ ಆಟಿ ತಿನಸುಗಳ ಪ್ರದರ್ಶನ ಗಮನ ಸೆಳೆಯಿತು. ಉಪ್ಪಡ್ ಪಚ್ಚಿಲ್(ಉಪ್ಪು ಸೋಳೆ), ಹಲಸಿನ ಹಣ್ಣಿನ ದೋಸೆ, ಹಲಸಿನ ಹಣ್ಣಿನ ಗಾರಿಕೆ, ಗಟ್ಟಿ, ಹಪ್ಪಳ, ಹಲಸಿನ ಬೀಜದ ಚಟ್ನಿ, ಪಲ್ಯ, ಸಾಂತಾಣಿ, ಹಲಸಿನ ಬೀಜದ ದೋಸೆ, ಹಲಸಿನ ಕಾಯಿ ಪ್ರಲ್ಯ, ಕೊಚ್ಚಿ ಪದಾರ್ಥ, ಕಣಿಲೆ ಪಲ್ಯ,ಕಣಿಲೆ ಉಪ್ಪಿನಕಾಯಿ, ಕಡುಬು, ನೀರು ಕಡುಬು, ಬಾಳೆ ದಿಂಡಿನ ಪಲ್ಯ, ತಜಂಕ್ ಪಲ್ಯ, ತಜಂಕ್ ಅಂಬಡೆ, ಪತ್ರೊಡೆ , ಪಅಯಸ, ಆಕ್ಕಿ ಉಂಡೆ, ಮೊದಲಾದ ತಿಂಡಿ ತಿನಸುಗಳು ಗಮನ ಸೆಳೆದವು. ಜೊತೆಗೆ ಕಷಾಯ, ಪಾನಕ ವ್ಯವಸ್ಥೆ ಮಾಡಲಾಗಿತ್ತು. ಕುಂಬಳೆ ಸೀಮೆಯ ಪ್ರಧಾನ ದೆ„ವನರ್ತಕ ಡಾ.ರವೀಶ ಪರವ ಪಡುಮಲೆ, ಸಮಾಜ ಸೇವಕ ಮೊಹಮ್ಮದ್ ಫಾರೂಕ್ ಚಂದ್ರನಗರ ಅವರನ್ನು ವಿಶೇಷ ಸೇವೆಗಳನ್ನು ಪರಿಗಣಿಸಿ ಸನ್ಮಾನಿಸಿ ಗೌರವಿಸಲಾಯಿತು. ಕುನ್ನಿಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಪಕ್ರುದ್ದೀನ್ ಕುನ್ನಿಲ್ ಹಾಗೂ ಎಂ.ಫಿಲ್ ಪದವಿ ಪಡೆದ ಜಿಲ್ಲೆಯ ಕೊರಗ ಜನಾಂಗದ ಮಹಿಳೆ ಮೀನಾಕ್ಷಿ ಬೊಡ್ಡೋಡಿ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕಾಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆಯವರನ್ನು ಅಭಿನಂದಿಸಲಾಯಿತು. ಬಹುಭಾಷೆಗೆ ಹೆಸರಾಗಿರುವ ಕಾಸರಗೋಡಿನ ಪುಣ್ಯಭೂಮಿಯಲ್ಲಿ ಪರಂಪರೆಯ ಬೇರುಗಳನ್ನು ಗಟ್ಟಿಗೊಳಿಸುವ ಆಚರಣೆಗಳಿಗೆ ಒತ್ತು ನೀಡುವ ಜಾನಪದ ಪರಿಷತ್ತು ಕೇರಳ ಘಟಕದ ಮಹತ್ವದ ಹೆಜ್ಜೆಗಳು ಕರ್ನಾಟಕಕ್ಕೂ ಮಾದರಿಯಾಗಿದೆ. ಜನಪದದ ಹಿರಿಮೆಯನ್ನು ಆಧುನಿಕ ಜಗತ್ತಲ್ಲೂ ಆದರ್ಶಮಯವಾಗಿ ಮುನ್ನಡೆಸುವ ಕಾರ್ಯ ಮೆಚ್ಚತಕ್ಕದ್ದು. ಅಂದಿನ ಒಳ್ಳೆಯ ಕಾಲದ ನೆನಪುಗಳೊಂದಿಗೆ ಜಾಗƒತಿ ಮೂಡಿಸುವ ಕೆಲಸವೂ ಆಗುತ್ತಿದೆ. ಗದ್ದೆಯಲ್ಲಿಂದು ಲೇಲೇ ಸ್ವರವಿಲ್ಲ. ಮೆಶೀನುಗಳ ಕರ್ಕಶ ದನಿಮಾತ್ರವಿದೆ. ಕೃಷಿ ಮಾಡುವಾಗಿನ ಸಂಭ್ರಮದ ಛಾಯೆ ಯಂತ್ರಗಳ ಮಾಯೆಯಲ್ಲಿ ಮಾಯವಾಗಿದೆ. ಅಂದಿನ ಜೀವನಕ್ರಮದ ಚಿಂತನೆಯನ್ನು ಇಂದಿನ ಹಾಗೂ ಮುಂದಿನ ಜನಾಂಗಕ್ಕೆ ನೀಡುವ ಇಂತಹ ಕಾರ್ಯಕ್ರಮಗಳು ಮುಂದೆಯೂ ನಡೆಯುತ್ತಿರಲಿ.
ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ