Advertisement

ವಸಾಯಿ ಕರ್ನಾಟಕ ಸಂಘ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆ

01:09 PM Aug 19, 2021 | Team Udayavani |

ವಸಾಯಿ: ಕಳೆದ ನಾಲ್ಕು ದಶಕಗಳಿಂದ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರಸಿದ್ಧಿಗೆ ಬಂದಂತಹ ವಸಾಯಿ ಕರ್ನಾಟಕ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯು ಆ. 15ರಂದು ನಡೆಯಿತು.

Advertisement

ಸಂಘದ ಅಧ್ಯಕ್ಷ ಪಾಂಡು ಎಲ್‌. ಶೆಟ್ಟಿ ಅವರು ಸಂಘದ ಸರ್ವ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಮಹಿಳಾ ವಿಭಾಗ ಮತ್ತು ಯುವ ವಿಭಾಗ ಸಮಿತಿ ಸದಸ್ಯರ ಉಪಸ್ಥಿತಿಯಲ್ಲಿ ವಸಾಯಿ ಪಶ್ಚಿಮದ ಸಾಯಿನಗರದ ಪಾರ್ವತಿ ಸಿನೇಮಾಗೃಹ ಸಮೀಪದ ಹ್ಯಾಪಿ ಜೀವನ್‌ 4-5 ಕಟ್ಟಡದಲ್ಲಿರುವ ಸಂಘದ ಕಚೇರಿಯ ಆವರಣದಲ್ಲಿ ಧ್ವಜಾರೋಹಣಗೈದು ಧ್ವಜವಂದನೆ ಸ್ವೀಕರಿಸಿದರು.

ಇದನ್ನೂ ಓದಿ:ಮಸೀದಿಯಲ್ಲಿ ಹಿಂದೂ ದೇವರ ದರ್ಶನ

ಸಂಘದ ಗೌರವ ಅಧ್ಯಕ್ಷ ವಿಶ್ವನಾಥ ಪಿ. ಶೆಟ್ಟಿ, ಉಪಾಧ್ಯಕ್ಷ ದೇವೇಂದ್ರ ಬಿ. ಬುನ್ನನ್‌, ಗೌರವ ಕೋಶಾಧಿಕಾರಿ ವಿಜಯ್‌ ಎಂ. ಶೆಟ್ಟಿ, ಸಲಹಾ ಸಮಿತಿ ಕಾರ್ಯಾಧ್ಯಕ್ಷ ಒ. ಪಿ. ಪೂಜಾರಿ, ಜತೆ ಕಾರ್ಯದರ್ಶಿ ರವೀಂದ್ರ ಕೆ. ಶೆಟ್ಟಿ, ಜತೆ ಕೋಶಾಧಿಕಾರಿ ಹರಿಪ್ರಸಾದ್‌ ಎಸ್‌. ಶೆಟ್ಟಿ, ಸದಸ್ಯತನ ನೋಂದಣಿ ಸಮಿತಿ ಕಾರ್ಯಾಧ್ಯಕ್ಷ ಬಿ. ವಿಟಲ್‌ ರೈ, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್‌ ಎನ್‌. ಶೆಟ್ಟಿ, ಮಹಿಳಾ ವಿಭಾಗ ಕಾರ್ಯಾಧ್ಯಕ್ಷೆ ಪ್ರಮೀಳಾ ಎನ್‌. ಅಮೀನ್‌, ಯುವ ವಿಭಾಗದ ಕಾರ್ಯಾಧ್ಯಕ್ಷ ಪೃಥ್ವಿರಾಜ್‌ ಎಸ್‌. ಶೆಟ್ಟಿ ಉಪಸ್ಥಿತರಿದ್ದರು.

ಧ್ವಜಾರೋಹಣ ಕಾರ್ಯಕ್ರಮವನ್ನು ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ವಿಜಯ್‌ ಪಿ. ಶೆಟ್ಟಿ ಕುತ್ತೆತ್ತೂರು ನಿರೂಪಿಸಿ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next