Advertisement

ವಸಾಯಿರೋಡ್‌ ಜಿಎಸ್‌ಬಿ ಬಾಲಾಜಿ ಮಂದಿರ: ಸಹಸ್ರ ತುಳಸಿ ಅರ್ಚನೆ

04:56 PM Jun 14, 2018 | Team Udayavani |

ಮುಂಬಯಿ: ವಸಾಯಿರೋಡ್‌ ಪಶ್ಚಿಮದ ಗೌಡ ಸಾರಸ್ವತ ಬ್ರಾಹ್ಮಣ ಜಿಎಸ್‌ಬಿ ಸಮಾದವರ ಬಾಲಾಜಿ ಸೇವಾ ಸಮಿತಿಯ ಬಾಲಾಜಿ ಮಂದಿರದಲ್ಲಿ ಅಧಿಕ ಮಾಸದ ಅಂಗವಾಗಿ ಸಹಸ್ರ ತುಳಸಿ ಅರ್ಚನೆಯು ಜೂ. 12 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

Advertisement

ವೇ|ಮೂ| ಗಿರಿಧರ ಭಟ್‌ ಅವರ ಮಾರ್ಗದರ್ಶನದಲ್ಲಿ ಸಮಿತಿಯ ಸಂಚಾಲಕ ದೇವೇಂದ್ರ ಭಕ್ತ ಅವರು ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು. ಶ್ರೀ ಕೃಷ್ಣ ದೇವರಿಗೆ ಪಂಚಾಮೃತ ಅಭಿಷೇಕ, ವೈವಿಧ್ಯಮಯ ಪೂಜೆ ಮತ್ತು ಸಮಾಜದ ಸದಸ್ಯರಿಂದ ಸಹಸ್ರ ನಾಮ ಪಠಣೆ, ಸಹಸ್ರ ತುಳಸಿ ಅರ್ಚನೆ ನಡೆಯಿತು.

ಆನಂತರ ಶ್ರೀ ಕೃಷ್ಣ ಬಾಲಾಜಿ ಮತ್ತು ಇತರ ಪರಿವಾರ ದೇವರಿಗೆ ಮಹಾಮಂಗಳಾರತಿ ನಡೆಯಿತು. ಪ್ರಸಾದ ರೂಪದಲ್ಲಿ ದೇವೇಂದ್ರ ಭಕ್ತ ಪರಿವಾರದವರಿಂದ ಪಾನಕ ಮತ್ತು ಲಕ್ಷ್ಮಣ್‌ ರಾವ್‌ ಪರಿವಾರದವರ ವತಿಯಿಂದ ಪಂಚಕಜ್ಜಾಯದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಸಮಿತಿಯ ಅಧ್ಯಕ್ಷ ತಾರಾನಾಥ ಪೈ, ಕಾರ್ಯದರ್ಶಿ ಪುರುಷೋತ್ತಮ ಶೆಣೈ, ಸಂಚಾಲಕ ದೇವೇಂದ್ರ ಭಕ್ತ ಮತ್ತು ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರ ಉಸ್ತುವಾರಿಯಲ್ಲಿ ಈ ಧಾರ್ಮಿಕ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ಅಧಿಕ ಮಾಸದಲ್ಲಿ ಜರಗಿದ ಈ ವಿಶೇಷ ಪೂಜೆಯಲ್ಲಿ ಸಮಾಜ ಬಾಂಧವರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.
 

Advertisement

Udayavani is now on Telegram. Click here to join our channel and stay updated with the latest news.

Next