Advertisement

ಬಿಡುಗಡೆಗೆ ಸಿದ್ದವಾದ ‘ವಾಸಂತಿ ನಲಿದಾಗ’

03:37 PM Sep 20, 2022 | Team Udayavani |

“ವಾಸಂತಿ ನಲಿದಾಗ’ ಎಂಬ ಚಿತ್ರವೊಂದು ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ, ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. “ಜೇನುಗೂಡು ಸಿನಿಮಾ’ ಬ್ಯಾನರ್‌ ನಡಿ ಕೆ.ಎನ್‌.ಶ್ರೀಧರ್‌ ನಿರ್ಮಾಣ ಮಾಡಿರುವ ಚಿತ್ರಕ್ಕೆ ರವೀಂದ್ರ ವೆಂಶಿ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

Advertisement

ನಿರ್ದೇಶಕ ರವೀಂದ್ರ ವೆಂಶಿ ಮಾತನಾಡಿ, “ಒಂದೊಳ್ಳೆ ತಂಡ ಸೇರಿಕೊಂಡು ಸಿನಿಮಾ ಮಾಡಿದ್ದೇವೆ. ಒಂದು ವರ್ಷದ ಜರ್ನಿ ಇದು. ಯೂತ್‌ ಫ‌ುಲ್‌ ಎಂಟರ್‌ ಟೆನ್ಮೆಂಟ್‌ ಚಿತ್ರವಿದು. ಕಂಟೆಂಟ್‌ ತುಂಬಾ ಚೆನ್ನಾಗಿದೆ’ ಎಂದರು.

ನಿರ್ಮಾಪಕ ಕೆ.ಎನ್‌.ಶ್ರೀಧರ್‌ ಮಾತನಾಡಿ, “ಸಿನಿಮಾದ ಕೌಂಟ್‌ ಡೌನ್‌ ಶುರುವಾಗಿದೆ. ಇನ್ನೂ 30 ದಿನಕ್ಕೆ ಸಿನಿಮಾ ಬೆಳ್ಳಿತೆರೆ ಮೇಲೆ ಇರುತ್ತದೆ. ರಾಜ್ಯಾದ್ಯಂತ ಸಿನಿಮಾವನ್ನು ಜಯಣ್ಣ ವಿತರಣೆ ಮಾಡುತ್ತಿದ್ದಾರೆ. ಮನೆ ಮಂದಿ ಕುಳಿತು ನೋಡುವ ಚಿತ್ರವಿದು. ಅಕ್ಟೋಬರ್‌ 14ರಂದು ಸಿನಿಮಾ ತೆರೆಗೆ ಬರ್ತಿದೆ ಪ್ರತಿಯೊಬ್ಬರು ಬೆಂಬಲ ಕೊಡಿ’ ಎಂದರು.

ಕಾಲೇಜ್‌ ಸ್ಟೋರಿ ಜೊತೆಗೆ ಒಂದು ಪ್ರೇಮಕಥೆಯನ್ನು ಒಳಗೊಂಡಿರುವ ವಾಸಂತಿ ನಲಿದಾಗ ಚಿತ್ರದಲ್ಲಿ, ಯುವ ಪ್ರತಿಭೆಗಳಾದ ರೋಹಿತ್‌ ಶ್ರೀಧರ್‌ ನಾಯಕನಾಗಿ, ಭಾವನಾ ಶ್ರೀನಿವಾಸ್‌ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಉಳಿದಂತೆ ಜೀವಿತ ವಸಿಷ್ಠ  ಸಾಯಿಕುಮಾರ್‌, ಸುಧಾರಾಣಿ, ಸಾಧುಕೋಕಿಲ, ಮಂಜು ಪಾವಗಡ, ಮಿಮಿಕ್ರಿ ಗೋಪಿ ಮುಂತಾದ ಅನುಭವಿ ಕಲಾವಿದರು ಅಭಿನಯಿಸಿದ್ದಾರೆ.

ಚಿತ್ರಕ್ಕೆ ಶ್ರೀಗುರು ಸಂಗೀತ, ಯೋಗರಾಜ್‌ ಭಟ್‌, ನಾಗೇಂದ್ರ ಪ್ರಸಾದ್‌, ಗೌಸ್‌ ಪೀರ್‌ ಸಾಹಿತ್ಯವಿದೆ. ಸಿ.ರವಿಚಂದ್ರನ್‌ ಸಂಕಲನ, ಪ್ರಮೋದ್‌ ಭಾರತೀಯ ಛಾಯಾಗ್ರಾಹಣವಿದೆ. ಟ್ರೇಲರ್‌ ರಿಲೀಸ್‌ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಮುನ್ನುಡಿ ಬರೆದಿರುವ ಚಿತ್ರತಂಡ ಮುಂದಿನ ಅಕ್ಟೋಬರ್‌ 14ಕ್ಕೆ ಸಿನಿಮಾವನ್ನು ತೆರೆಗೆ ತರಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next