Advertisement

ಎಲ್ಲ ಪರೀಕ್ಷೆ ರದ್ದುಪಡಿಸಲು ವಾಟಾಳ್‌ ಒತ್ತಾಯ

08:37 PM Jun 07, 2020 | Sriram |

ಬೆಂಗಳೂರು: ಎಸ್‌ಎಸ್‌ಎಲ್‌ಸಿ, ಫಾರ್ಮಸಿ, ಎಂಜಿನಿಯರಿಂಗ್‌ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ರದ್ದುಗೊಳಿಸಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

Advertisement

ಈ ವೇಳೆ ಮಾತನಾಡಿದ ಅವರು, ಕೋವಿಡ್-19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಪೋಷಕರು ತೀವ್ರ ಸಂಕಷ್ಟದಲ್ಲಿದ್ದಾರೆ. ಈಗ ಪರೀಕ್ಷೆ ಬರೆಯಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ತರಗತಿಯಲ್ಲಿ ವಿದ್ಯಾರ್ಥಿಗಳ ಕಲಿಕಾ ಮಾನದಂಡ ಅನುಸರಿಸಿ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕಾನ್ಪುರ ಐಐಟಿ ಸೇರಿದಂತೆ 12 ರಾಜ್ಯಗಳು ಈಗಾಗಲೇ ಕೋವಿಡ್-19 ಕಾರಣದಿಂದ ಎಲ್ಲ ಪದವಿ (ಅಂತಿಮ ಪರೀಕ್ಷೆ ಹೊರತುಪಡಿಸಿ) ಪರೀಕ್ಷೆಯನ್ನು ರದ್ದುಗೊಳಿಸಿವೆ. ಎಂಜಿನಿಯರಿಂಗ್‌ , ಫಾರ್ಮಸಿ, ಡಿಪ್ಲೊಮ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಉತ್ತೀರ್ಣ ಗೊಳಿಸಬೇಕೆಂದು ಆಗ್ರಹಿಸಿದರು.

ದೇಶ ಹಾಗೂ ರಾಜ್ಯಾದ್ಯಂತ ಮಹಾಮಾರಿ ಕೋವಿಡ್-19 ವ್ಯಾಪಿಸುತ್ತಿದೆ. ಈ ಸಂದರ್ಭದಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹಾಜರಾಗಿ ಅವರಲ್ಲಿ ಸೋಂಕು ಹರಡಿದರೆ ಮತ್ತಷ್ಟು ಆತಂಕ ಹೆಚ್ಚಾಗುತ್ತದೆ. ಹೀಗಾಗಿ ತರಗತಿಯಲ್ಲಿ ವಿದ್ಯಾರ್ಥಿಗಳ ಕಲಿಕಾ ಮಾನದಂಡ ಅನುಸರಿಸಿ ತೇರ್ಗಡೆ ಮಾಡುವುದೇ ಸೂಕ್ತ ಎಂದು ಹೇಳಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next