Advertisement

ಸುವರ್ಣಸೌಧದೆದುರು ವಾಟಾಳ್‌ ಪ್ರತಿಭಟನೆ

06:40 AM Dec 09, 2018 | Team Udayavani |

ಬೆಳಗಾವಿ: ಚಳಿಗಾಲ ಅಧಿವೇಶನ ನೆಪ ಮಾಡಿಕೊಂಡು ಬೆಳಗಾವಿಗೆ ಬಂದು ಮಜಾ ಮಾಡುತ್ತಿರುವ ರಾಜಕಾರಣಿಗಳು ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆಂದು ಆರೋಪಿಸಿ ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್‌ ಶನಿವಾರ ಸುವರ್ಣ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.

Advertisement

ಸುವರ್ಣಸೌಧದ ಗೇಟ್‌ ಎದುರು ಮಲಗಿಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಾಟಾಳ್‌, ಸುದ್ದಿಗಾರರೊಂದಿಗೆ ಮಾತನಾಡಿದರು. ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡದೆ ಕಾಟಾಚಾರಕ್ಕೆ ಅಧಿವೇಶನ ನಡೆಸಲಾಗುತ್ತಿದೆ. ಈ ಬಾರಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು. ಸರ್ಕಾರ ಎಂದರೆ ಕೇವಲ ಬೆಂಗಳೂರು-ಮೈಸೂರು ಮಾತ್ರ ಆಗಿದೆ. ಉತ್ತರ ಕರ್ನಾಟಕದ ರೈತರ, ಸಣ್ಣ ಕೈಗಾರಿಕೋದ್ಯಮಿಗಳ ಹಾಗೂ ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸಬೇಕು. 

ಉತ್ತರ ಕರ್ನಾಟಕದ ಬಗೆಗಿನ ತಾರತಮ್ಯ ನಿವಾರಿಸಲು ಪ್ರತ್ಯೇಕ ಉಪ ಮುಖ್ಯಮಂತ್ರಿಯನ್ನು ನೇಮಿಸಬೇಕು. ಸುವರ್ಣ ವಿಧಾನಸೌಧದಿಂದಲೇ ಉಪ ಮುಖ್ಯಮಂತ್ರಿ ಅಧಿಕಾರ ಆರಂಭಿಸಬೇಕು. ಈ ಸಲದ ಅಧಿವೇಶನದಲ್ಲಿ ಇಲ್ಲಿಯ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಎಲ್ಲ ಪಕ್ಷದ ಶಾಸಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಆಗ್ರಹಿಸಿದರು. ಪ್ರತಿಭಟನೆ ನಡೆಸುತ್ತಿದ್ದ ವಾಟಾಳ್‌ ಅವರನ್ನು ಪೊಲೀಸರು ವಶಕ್ಕೆ ಪಡೆದು, ಬಿಡುಗಡೆಗೊಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next