Advertisement

ವೀಣಾ ಕಾಶಪ್ಪನವರ ರಾಜೀನಾಮೆ: ಮೇಲುಗೈ ಸಾಧಿಸಿದ ಮೇಟಿ ಪುತ್ರಿ 

01:26 AM Feb 15, 2019 | |

ಬಾಗಲಕೋಟೆ: ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದ್ದ ಜಿಪಂ ಅಧ್ಯಕ್ಷ ಸ್ಥಾನಕ್ಕೆ ವೀಣಾ ಕಾಶಪ್ಪನವರ ಗುರುವಾರ ರಾಜೀನಾಮೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ  ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್‌.ಕೆ. ಅತೀಕ್‌ ಅವರಿಗೆ ಗುರುವಾರ ರಾಜೀನಾಮೆ ಸಲ್ಲಿಸಿದ್ದು, ಅಂಗೀಕರಿಸಲು ಕೋರಿದ್ದಾರೆ.

Advertisement

36 ಸದಸ್ಯ ಬಲದ ಜಿಪಂನಲ್ಲಿ ಕಾಂಗ್ರೆಸ್‌-17, ಬಿಜೆಪಿ-18 ಹಾಗೂ ಓರ್ವ ರೈತ ಸಂಘದ (ಪಕ್ಷೇತರ) ಸದಸ್ಯರಿದ್ದಾರೆ. ಬಿಜೆಪಿ ದೊಡ್ಡ ಪಕ್ಷವಾದರೂ ಅಧಿಕಾರದಿಂದ ವಂಚಿತವಾಗಿತ್ತು. ರೈತ ಸಂಘದ ಸದಸ್ಯರಿಗೆ ಉಪಾಧ್ಯಕ್ಷ ಸ್ಥಾನ ಕೊಟ್ಟು, ಬಿಜೆಪಿಯ ಓರ್ವ ಸದಸ್ಯರು, ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಯಿಂದ ಹೊರಗುಳಿಯುವಂತೆ ಮಾಡುವ ಮೂಲಕ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ಪಡೆದಿತ್ತು.

ಹುನಗುಂದ ತಾಲೂಕು ಧನ್ನೂರ ಜಿಪಂ ಕ್ಷೇತ್ರದಿಂದ ಆಯ್ಕೆಗೊಂಡು ಮೊದಲ ಬಾರಿಗೆ ರಾಜಕೀಯ ಪ್ರವೇಶ ಮಾಡಿದ್ದ ವೀಣಾ ಕಾಶಪ್ಪನವರ, ಪತಿ ವಿಜಯಾನಂದ ಕಾಶಪ್ಪನವರ ಹಾಗೂ ಕಾಂಗ್ರೆಸ್‌ ನಾಯಕರ ಬೆಂಬಲದೊಂದಿಗೆ ಮೊದಲ ಅವಧಿಯಲ್ಲೇ ಅಧ್ಯಕ್ಷ ಸ್ಥಾನ ಪಡೆದಿದ್ದರು. ಆದರೆ, ಆಗ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಮಾಜಿ ಸಚಿವ ಎಚ್‌.ವೈ. ಮೇಟಿ ಪುತ್ರಿ ಬಾಯಕ್ಕ ಮೇಟಿ ಅವರಿಗೆ ಪಕ್ಷದ ವರಿಷ್ಠರು ಸುಮ್ಮನಿರಲು ತಿಳಿಸಿದ್ದರು. ಆದರೆ, ವೀಣಾ ಅವರ ಅಧ್ಯಕ್ಷ ಸ್ಥಾನದ ಅವಧಿ 30 ತಿಂಗಳು ಆಗುತ್ತಿದ್ದಂತೆ ರಾಜೀನಾಮೆ ನೀಡಲು ಕಾಂಗ್ರೆಸ್‌ನ ಒಂದು ಬಣ ತೀವ್ರ ಒತ್ತಡ ಹೇರಿತ್ತು. ಕೊನೆಗೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವದಲ್ಲಿ ಸದಸ್ಯರ ಸಭೆ ನಡೆಸಿ, ವೀಣಾ ರಾಜೀನಾಮೆ ನೀಡಲು ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ವೀಣಾ ಅವರು ತಮ್ಮ ಪತಿ ವಿಜಯಾನಂದ ಕಾಶಪ್ಪನವರ ಅವರೊಂದಿಗೆ ಆರ್‌ಡಿಪಿಆರ್‌ ಪ್ರಧಾನ ಕಾರ್ಯದರ್ಶಿಗೆ ರಾಜೀನಾಮೆ ನೀಡಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next