Advertisement

ಸುರತ್ಕಲ್‌ ಜಂಕ್ಷನ್‌ಗೆ ವೀರ ಸಾವರ್ಕರ್ ಹೆಸರು ಪ್ರಸ್ತಾಪ; ಪಾಲಿಕೆ ಸಭೆಯಲ್ಲಿ ಗದ್ದಲ

01:10 PM Oct 29, 2022 | Team Udayavani |

ಮಂಗಳೂರು: ಸುರತ್ಕಲ್ ಜಂಕ್ಷನ್‌ಗೆ ವೀರ ಸಾವರ್ಕರ್ ಹೆಸರು ಇಡುವ ಬಗ್ಗೆ ಬಿಜೆಪಿ ಸದಸ್ಯರು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದು ಇದರಿಂದಾಗಿ ಸಭೆಯಲ್ಲಿ ಗದ್ದಲ ಉಂಟಾಗಿ ಕೆಲ‌ ಕಾಲ‌ ಸಭೆ ಮುಂದೂಡಿಕೆಯಾದ ಘಟನೆ ನಡೆಯಿತು.

Advertisement

ಶನಿವಾರ ನಡೆದ ಪಾಲಿಕೆಯ ಸಭೆ ಸಾಮಾನ್ಯ ಸಭೆಯಲ್ಲಿ  ಸುರತ್ಕಲ್‌ ಜಂಕ್ಷನ್‌ ಗೆ  ವೀರ ಸಾವರ್ಕರ್ ಹೆಸರು ಇಡಬೇಕೆಂದು ಪ್ರಸ್ತಾಪ ಮಾಡಿದ್ದರು. ಇದನ್ನು ವಿರೋಧಿಸಿ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆಗೆ ಇಳಿದಾಗ, ಬಿಜೆಪಿ ಸದಸ್ಯರು ವೀರ ಸಾವರ್ಕರ್ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ.

ಕಳೆದ‌‌‌ ಸಾಮಾನ್ಯ ಸಭೆಯಲ್ಲಿ ಮಂಡಿಸಿದ ಅಜೆಂಡದಲ್ಲಿ ಬಿಜೆಪಿ ಚರ್ಚೆಗೆ ಅವಕಾಶ ನೀಡಲಿಲ್ಲ. ಅದನ್ನು ಸ್ಥಿರೀಕರಣಗೊಳಿಸದೆ ನಮ್ಮ‌ಆಕ್ಷೇಪಣೆ ದಾಖಲು ಮಾಡಬೇಕೆಂದು ಕಾಂಗ್ರೆಸ್‌ ಸದಸ್ಯರು ಒತ್ತಾಯ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next