Advertisement

ಸಾವರ್ಕರ್‌ ಅವಹೇಳನ: ರಾಹುಲ್‌ ಗಾಂಧಿ ವಿರುದ್ಧ ದೂರು ದಾಖಲು

11:07 AM Nov 15, 2018 | udayavani editorial |

ಮುಂಬಯಿ : ಹಿಂದುತ್ವದ ಪ್ರಾತಿನಿಧಿಕ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ದಿವಂಗತ ವೀರ್‌ ಸಾವರ್ಕರ್‌ ಬಗ್ಗೆ ಸುಳ್ಳು ಹಾಗೂ ಅವಹೇಳನಕಾರಿ ಮಾತುಗಳನ್ನಾಡಿರುವರೆಂಬ ಆರೋಪದ ಮೇಲೆ  ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ವೀರ ಸಾವರ್ಕರ್‌ ಅವರ ಮರಿ-ಸೋದರ ಸಂಧಿ ರಂಜೀತ್‌ ಸಾವರ್ಕರ್‌ ಅವರು ಮುಂಬಯಿ ಶಿವಾಜಿ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

Advertisement

ಸ್ವಾತಂತ್ರ್ಯ ಹೋರಾಟಗಾರನಾಗಿ ಜೈಲು ಸೇರಿದ್ದ ವೀರ್‌ ಸಾವರ್ಕರ್‌ ಅವರು ಬ್ರಿಟಿಷರ ಬಳಿ ತನ್ನ ಜೈಲಿನಿಂದ ಬಿಡುಗಡೆ ಮಾಡುವಂತೆ ಅಂಗಲಾಚಿದ್ದರು ಮತ್ತು ತನ್ನ ಕೃತ್ಯಗಳಿಗಾಗಿ ಕ್ಷಮೆಯಾಚಿಸಿದ್ದರು ಎಂದು ರಾಹುಲ್‌ ಗಾಂಧಿ ಚುನಾವಣಾ ಪ್ರಚಾರ ಭಾಷಣದಲ್ಲಿ ಹೇಳಿದ್ದರು.  ವೀರ ಸಾವರ್ಕರ್‌ ಅವರನ್ನು ಬ್ರಿಟಿಷರು 27 ವರ್ಷಗಳ ಅವಧಿಕೆ ಜೈಲಿಗೆ ಹಾಕಿದ್ದರು. 

“ಸಾವರ್ಕರ್‌ ಅವರನ್ನು ಅವಮಾನಿಸುವ ಹೇಳಿಕೆ ನೀಡಿರುವ ಕಾರಣಕ್ಕೆ ನಾನು ರಾಹುಲ್‌ ಗಾಂಧಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇನೆ’ ಎಂದು ರಂಜೀತ್‌ ಸಾವರ್ಕರ್‌ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. 

ಚುನಾವಣಾ ರಾಲಿಯಲ್ಲಿ ಮಾತನಾಡುತ್ತಿದ್ದ ರಾಹುಲ್‌ ಗಾಂಧಿ ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ವಿರುದ್ಧ ಹರಿಹಾಯ್ದು “ದೇಶದಲ್ಲೀಗ ಮಹಿಳೆಯರು ತಮ್ಮ ಮೇಲೆ ದಾಳಿ ನಡೆಯಬಹುದೆಂಬ ಭೀತಿಯಿಂದ ಹೊರಗೆ ಬರಲು ಹೆದರುತ್ತಿದ್ದಾರೆ; ಅಂತಹ ಸ್ಥಿತಿ ಈಗ ದೇಶದಲ್ಲಿ ನಿರ್ಮಾಣವಾಗಿದೆ’ ಎಂದು ಟೀಕಿಸಿದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next