Advertisement

ಹಿರಿಯಡಕ: ಸಂಭ್ರಮದ ಸಿರಿಜಾತ್ರೆ ಸಂಪನ್ನ

03:56 AM Apr 20, 2019 | Sriram |

ಹೆಬ್ರಿ: ಇತಿಹಾಸ ಪ್ರಸಿದ್ಧ ಪೌರಾಣಿಕ ಹಿನ್ನಲೆಯುಳ್ಳ ಉಡುಪಿ ತಾಲೂಕಿನ ಹಿರಿಯಡಕ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರದಂದು ಸಿರಿಜಾತ್ರೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು.

Advertisement

ದೇವರಿಗೆ ಆರಾಧನಾ ಪೂಜೆ, ಪೂರ್ಣಿಮಾ ಉತ್ಸವ, ಹಾಲುಹಬ್ಬ, ಸವಾರಿ ಬಲಿ, ಬ್ರಹ್ಮಮಂಡಲ, ಭೂತ ಬಲಿ ನಡೆಯಿತು. ಸಿರಿಜಾತ್ರೆ ಆಚರಣೆಯ ಪ್ರಧಾನ ಕೇಂದ್ರವಾದ ಆಲಡೆ ಕ್ಷೇತ್ರಕ್ಕೆ ಉಡುಪಿ, ದಕ್ಷಿಣ ಕನ್ನಡ ಮಾತ್ರವಲ್ಲದೆ ಶಿವಮೊಗ್ಗ, ತೀರ್ಥಹಳ್ಳಿಯಲ್ಲಿ ನೆಲೆಸಿರುವ ಅಪಾರ ಭಕ್ತರು ಪಾಲ್ಗೊಂಡಿದ್ದರು.

ಈ ಸಂದರ್ಭ ಹಿರಿಯಡಕ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಎಚ್‌. ಹಾಲಪ್ಪ ಮೊದ ಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next