Advertisement

Veeramangala: ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ

11:49 PM Sep 05, 2023 | Team Udayavani |

ನರಿಮೊಗರು: ಕೊಟ್ಟಿಗೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಸೆ. 5ರಂದು ಮುಂಜಾನೆ ಶಾಂತಿಗೋಡು ಗ್ರಾಮದ ವೀರಮಂಗಲದಲ್ಲಿ ಸಂಭವಿಸಿದೆ.

Advertisement

ವೀರಮಂಗಲ ಪರಂದೋಡಿ ನಿವಾಸಿ ಸುಲೈಮಾನ್‌ ಅವರ ಮನೆಯ ಪಕ್ಕದಲ್ಲಿರುವ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು ಕೊಟ್ಟಿಗೆಯಲ್ಲಿದ್ದ ಅಡಿಕೆ, ಕಟ್ಟಿಗೆ ಮತ್ತಿತರ ವಸ್ತುಗಳು ಸುಟ್ಟು ಹೋಗಿದ್ದು ಕೊಟ್ಟಿಗೆಯ ಶೀಟ್‌ಗೆ ಬೆಂಕಿ ಹೊತ್ತಿಕೊಂಡ ಕಾರಣ ಕೊಟ್ಟಿಗೆ ಭಾಗಶಃ ಸುಟ್ಟು ಭಸ್ಮವಾಗಿದೆ.

ಸ್ಥಳೀಯರು ಬೆಂಕಿ ನಂದಿಸುವಲ್ಲಿ ಸಹಕರಿಸಿದರು. ಘಟನೆಯಿಂದ 40 ಸಾವಿರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next