Advertisement
ಇಲ್ಲಿನ ಲಿಂಗಾಯತ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯವೇ ಅತ್ಯಧಿಕ ಪ್ರಮಾಣದಲ್ಲಿದ್ದು, ಯಾವ ಪಕ್ಷವೂ ನಮ್ಮ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿಲ್ಲ. ಹೀಗಾಗಿ ಬಿಜೆಪಿ ಪಕ್ಷದಲ್ಲಿ ಈಗಾಗಲೇ ನಾಲ್ಕು ಬಾರಿ ಒಬ್ಬರಿಗೆ ಟಿಕೇಟ್ ನೀಡಿದ್ದು, ಈ ಬಾರಿ ಲಿಂಗಾಯತರಿಗೆ ಟಿಕೇಟ್ ನೀಡಬೇಕು ಎಂದು ಬಿಜೆಪಿ ಹೈಕಮಾಂಡ್ಗೆ ಒತ್ತಾಯಿಸಿದರು.
Related Articles
Advertisement
ಮಹಾಸಭಾದ ಕಾರ್ಯದರ್ಶಿ ಸಿದ್ದಣ್ಣ ಕಂಬಾರ, ಸದಸ್ಯರಾದ ಎಂ.ಡಿ.ಪಾಟೀಲ, ಗಂಗಣ್ಣ ಈರೇಶನವರ, ರಾಜಶೇಖರ ಉಪ್ಪಿನ, ಎಂ.ಎಫ್.ಹಿರೇಮಠ, ಕಲ್ಲಪ್ಪ ಯಲಿವಾಳ, ಅಮೃತ ಬೊಳ್ಳೊಳ್ಳಿ, ಆರ್.ಬಿ.ಪಾಟೀಲ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ಯಾವುದೇ ಸಂಬಂಧವಿಲ್ಲಹುಬ್ಬಳ್ಳಿಯಲ್ಲಿ ನಡೆದ ಮಠಾಧಿಶರ ಸಭೆಯಲ್ಲಿ ಪಾಲ್ಗೊಂಡಿದ್ದ ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿಗಳು, ದಿಂಗಾಲೇಶ್ವರ ಸ್ವಾಮೀಜಿಗಳು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ನೀಡಿದ್ದ ಹೇಳಿಕೆಗೂ ತಮ್ಮ ಮಠಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಶ್ರೀ ಕ್ಷೇತ್ರ ಮುರುಘಾಮಠ ಲೋಕಕಲ್ಯಾಣಾರ್ಥ ಸ್ಥಾಪನೆಯಾಗಿದ್ದು ಸರ್ವಸಮಾಜದ ಏಳಿಗೆಗಾಗಿ ಲಕ್ಷಾಂತರ ವಿದ್ಯಾರ್ಥಿಗಳು ಶ್ರೇಯೋಭಿವೃದ್ಧಿಗಾಗಿ ಕಾರ್ಯನಿರ್ವಹಿಸುವ ವೀರಶೈವ ಲಿಂಗಾಯತ ಮಠವಾಗಿದ್ದರು ಸಹ ಸರ್ವಸಮಾಜದ ಭಕ್ತರು ಗದ್ದುಗೆಯ ಆರಾಧಕರಿದ್ದರು. ಶ್ರೀ ಕ್ಷೇತ್ರ ಮುರುಘಾಮಠ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಲ್ಲ ಹಾಗೂ ಎಂದು ರಾಜಕೀಯ ವಿಷಯಗಳಲ್ಲಿ ಭಾಗವಹಿಸುವದಿಲ್ಲ ಹಾಗೂ ಯಾವದೇ ಅಭ್ಯರ್ಥಿ ಆಯ್ಕೆ ಆಯಾ ಪಕ್ಷದ ವರಿಷ್ಠರು ಹಾಗೂ ಅವರ ಪಕ್ಷದ ತೀರ್ಮಾನ ಇದಕ್ಕೆ ಮಠಮಾನ್ಯಗಳಿಗೂ ಯಾವುದೇ ಸಂಬಂಧವಿರುವುದಿಲ್ಲ ಎಂದು ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದ್ದಾರೆ.