Advertisement

ವೀರಶೈವರು ಕಾಂಗ್ರೆಸ್‌ಗೆ ಮತ ಹಾಕಲ್ಲ: ಬಿಎಸ್‌ವೈ

06:38 AM May 18, 2019 | Team Udayavani |

ಹುಬ್ಬಳ್ಳಿ: ವೀರೇಂದ್ರ ಪಾಟೀಲ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಿ ಕಾಂಗ್ರೆಸ್‌ ವಿಶ್ವಾಸದ್ರೋಹ ಮಾಡಿದೆ. ವೀರಶೈವರು ಕಾಂಗ್ರೆಸ್‌ಗೆ ಮತ ಹಾಕಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮತ್ತೂಮ್ಮೆ ಮೋದಿ ಸರ್ಕಾರ ಅಧಿಕಾರ ನಡೆಸಲಿದ್ದು, 290ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ ಜಯ ಗಳಿಸಲಿದೆ. ಮೋದಿ ಅವರು ಮತ್ತೂಮ್ಮೆ ಪ್ರಧಾನಿ ಸ್ಥಾನ ಅಲಂಕರಿಸುವುದು ಸೂರ್ಯ-ಚಂದ್ರರಿರುವಷ್ಟೇ ಸತ್ಯ.

ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್‌ ಮುಖಾಂತರ ಕಚ್ಚಾಟ ನಡೆಸಿ, ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ಲೋಕಸಭೆ ಹಾಗೂ ಉಪಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next