Advertisement

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

03:09 PM May 04, 2024 | Team Udayavani |

ಮೈಸೂರು: ಕಳೆದೆರೆಡು ತಿಂಗಳಿನಿಂದ ಬಿಸಿಲಿನ ತೀವ್ರತೆ ಹಾಗೂ ಮಳೆ ಕೊರತೆ ಪರಿಣಾಮ ಹಣ್ಣು ಮತ್ತು ತರಕಾರಿ ಬೆಳೆ ಕುಂಠಿತವಾಗಿದ್ದು, ಮಾರುಕಟ್ಟೆಯಲ್ಲಿ ತರಕಾರಿ ದರ ಬಿಸಿಲ ತಾಪದಂತೆ ಏರಿಕೆಯಾಗುತ್ತಿದೆ.

Advertisement

ಮಳೆ ಕೊರತೆ ಪರಿಣಾಮ ಜಿಲ್ಲೆಯ ವಿವಿಧ ಭಾಗದಲ್ಲಿ ರೈತರು ಬೆಳೆದಿದ್ದ ತರಕಾರಿ, ಹಣ್ಣು ಮತ್ತು ಸೊಪ್ಪು ಹೊಲದಲ್ಲೇ ಬತ್ತುತ್ತಿದ್ದು, ಇಳುವರಿ ಕುಠಿತವಾಗಿದೆ. ಪರಿಣಾಮ ಮಾರುಕಟ್ಟೆಗೆ ನಿರೀಕ್ಷಿತ ಪ್ರಮಾಣದಲ್ಲಿ ಪೂರೈಕೆಯಾಗದ ಹಿನ್ನೆಲೆ ತರಕಾರಿ ಬೆಲೆ ಗಗನಕ್ಕೇರಿದ್ದು, ಜಿಲ್ಲೆಯ ಜನತೆ ಹೈರಾಣಾಗಿದ್ದಾರೆ.

ಮಳೆ ಕೊರತೆಗೆ ಬತ್ತಿದ ಬೆಳೆ: ಕಳೆದ 22 ವರ್ಷಗಳ ಬಳಿಕ ಮತ್ತೆ ತೀವ್ರ ಮಳೆ ಕೊರತೆ ಎದುರಿರಾಗಿದ್ದು, ನೂರಾರು ಹೆಕ್ಟೇರ್‌ನಲ್ಲಿ ರೈತರು ಬೆಳೆದಿದ್ದ ಬೆಳೆ ನೀರಿಲ್ಲದೇ ಒಣಗುತ್ತಿವೆ. ತೀವ್ರ ಬರಗಾಲ ಹಿನ್ನೆಲೆ ನದಿ, ಕೆರೆ-ಕಟ್ಟೆಗಳ ಜತೆಗೆ ಅಂತರ್ಜಲ ಮಟ್ಟವೂ ಕುಸಿದಿರುವುದರಿಂದ ಬೇಸಿಗೆಯಲ್ಲಿ ಬೆಳೆದಿದ್ದ ಹಣ್ಣು, ತರಕಾರಿ ಬೆಳೆಗೆ ನೀರು ಒದಗಿಸಲಾಗದೆ ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇತ್ತ ವಾತಾವರಣದಲ್ಲಿನ ಉಷ್ಣತೆಗೆ ಫ‌ಸಲಿನ ಇಳುವರಿಯೂ ಕುಂಠಿತವಾಗಿದೆ.

ತಗ್ಗಿದ ಪೂರೈಕೆ ಪ್ರಮಾಣ: ಮೈಸೂರು ಜಿಲ್ಲೆಯ ವಿವಿಧ ತಾಲೂಕು ಸೇರಿದಂತೆ ಪಕ್ಕದ ಗುಂಡ್ಲುಪೇಟೆ, ಶ್ರೀರಂಗಪಟ್ಟಣ ತಾಲೂಕುಗಳಿಂದ ನಿತ್ಯವೂ 2 ಸಾವಿರ ಟನ್‌ಗೂ ಹೆಚ್ಚು ಪ್ರಮಾಣದ ತರಕಾರಿಯನ್ನು ನೂರಾರು ವಾಹನಗಳಲ್ಲಿ ತರಲಾಗುತ್ತಿತ್ತು. ಆದರೆ. ಕಳೆದೊಂದು ತಿಂಗಳಿನಿಂದ ಮೈಸೂರಿಗೆ ಪೂರೈಕೆಯಾಗುತ್ತಿರುವ ಪ್ರಮಾಣ ಕಡಿಮೆಯಾಗಿದ್ದು, 1 ಸಾವಿರ ಟನ್‌ಗೆ ಇಳಿಕೆಯಾಗಿದೆ. ಪರಿಣಾಮ ತರಕಾರಿ ಮತ್ತು ಸೊಪ್ಪಿಗೆ ಬೇಡಿಕೆ ಹೆಚ್ಚಾಗಿರುವ ಜತೆಗೆ ಬೆಲೆಯೂ ಹೆಚ್ಚಿದೆ.

ಸಾಮಾನ್ಯವಾಗಿ ಮಾರ್ಚ್‌, ಏಪ್ರಿಲ್‌ ಮತ್ತು ಮೇನಲ್ಲಿ ತರಕಾರಿ ಬೆಲೆ ಸಾಧಾರಣವಾಗಿತ್ತದೆ. ಆದರೆ ಈ ಬಾರಿ ಎಲ್ಲಾ ಬಗೆಯ ತರಕಾರಿಗಳು 50ರ ಗಡಿ ದಾಟಿದ್ದು, ಗ್ರಾಹಕರು ತರಕಾರಿ ಖರೀದಿಸಲು ಯೋಚಿಸುವಂತಾಗಿದೆ.

Advertisement

ಸಗಟು ಮಾರುಕಟ್ಟೆಯಲ್ಲಿ ದಪ್ಪಮೆಣಸಿನಕಾಯಿ, ಕ್ಯಾರೆಟ್‌, ಬೀನ್ಸ್‌, ಟೊಮೆಟೊ, ಈರುಳ್ಳಿ ಸೇರಿದಂತೆ ಹಲವು ತರಕಾರಿ ದರ ಹೆಚ್ಚಾಗಿದ್ದು, ರಿಟೇಲ್‌ ವ್ಯಾಪಾರಿಗಳು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿರುವುದರಿಂದ ಜನರು ಕಂಗಾಲಾಗಿ¨ªಾರೆ. ಬಹುತೇಕ ಕಡೆ ತರಕಾರಿ ಬೆಳೆ ಒಣಗಿದ್ದು, ಬೀನ್ಸ್‌ ಸೇರಿದಂತೆ ನಾನಾ ತರಕಾರಿ, ಸೊಪ್ಪುಗಳ ಪೂರೈಕೆ ಕಡಿಮೆಯಾಗಿದೆ. ಸಗಟು ಮಾರುಕಟ್ಟೆಯಲ್ಲಿ  ಈ ಹಿಂದೆ ಕೆ.ಜಿ.ಗೆ 10-20 ರೂ. ದರವಿದ್ದ ಟೊಮೆಟೊ 40-50ಕ್ಕೆ ಏರಿಕೆಯಾಗಿದೆ. ಒಂದು ಕಂತೆ ದಂಟು, ಮೆಂತ್ಯ, ಪಾಲಕ್‌, ಸಪ್ಸಿಗೆ, ಕೊತ್ತಂಬರಿ ಸೊಪ್ಪು 10 ರೂ. ಮುಟ್ಟಿದೆ.

 ಚಿಲ್ಲರೆ ಅಂಗಡಿಯಲ್ಲಿ ತರಕಾರಿಗಳ ಬೆಲೆ ದುಪ್ಪಟ್ಟು

ನಗರದ ವಿವಿಧೆಡೆ ಹಾಗೂ ಸಂತೆಗಳಲ್ಲಿ ತರಕಾರಿ ಸಗಟು ಮಾರಾಟ ಕೇಂದ್ರಗಳಿಗಿಂತ ದುಪ್ಪಟ್ಟು ಬೆಲೆಗೆ ತರಕಾರಿ ಮತ್ತು ಸೊಪ್ಪು ಮಾರಾಟವಾಗುತ್ತಿದ್ದು, ಟೊಮೊಟೊ ಪ್ರತಿ ಕೆ.ಜಿ.ಗೆ 100, ಈರುಳ್ಳಿಗೆ 90, ಕ್ಯಾರೆಟ್‌ಗೆ 80 ರೂ.ನಂತೆ ಮಾರಾಟವಾಗುತ್ತಿದ್ದು, ಗ್ರಾಹಕರಿಗೆ ಹೊರೆಯಾಗಿದೆ.

ಬೀನ್ಸ್‌, ಮೆಣಸಿನ ಕಾಯಿ ಬೆಲೆ ದಿಢೀರ್‌ ಏರಿಕೆ

30-40 ರೂ.ಗೆ ದೊರೆಯುತ್ತಿದ್ದ ಬೀನ್ಸ್‌ ಈಗ ಬಲು ದುಬಾರಿಯಾಗಿದ್ದು, ಪ್ರತಿ ಕಿಲೋಗೆ 160ರಿಂದ 180ಕ್ಕೆ ಮಾರಾಟ ಮಾಡಲಾಗುತ್ತಿದೆ. ಜತೆಗೆ 40 ರೂ. ಇದ್ದ ಹಸಿ ಮೆಣಸಿನ ಕಾಯಿ ಬೆಲೆ ಸಧ್ಯಕ್ಕೆ 70ರಿಂದ 80 ರೂಪಾಯಿಗೆ ಏರಿಕೆಯಾಗಿದೆ. ಬೆಂಡೆಕಾಯಿಗೆ 60, ಮೂಲಂಗಿ 60, ಕ್ಯಾರೆಟ್‌-ಬೀಟ್ರೋಟ್‌ 70, ಸೌತೆಕಾಯಿ 50, ಹಾಗಲಕಾಯಿ 70, ಕೋಸು 40 ರೂಪಾಯಿಗೆ ಮಾರಾಟವಾಗುತ್ತಿದೆ.

-ಸತೀಶ್‌ ದೇಪುರ

Advertisement

Udayavani is now on Telegram. Click here to join our channel and stay updated with the latest news.

Next