Advertisement

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

04:00 PM Jul 27, 2024 | Team Udayavani |

ಶ್ರೀನಗರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಮರಿಗೆ ಉರುಳಿಬಿದ್ದ ಪರಿಣಾಮ ಐದು ಮಕ್ಕಳು ಸೇರಿದಂತೆ ಎಂಟು ಜನ ಮೃತಪಟ್ಟ ಘಟನೆ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಸಿಂಥನ್-ಕೋಕೆರ್‌ನಾಗ್ ಮಾರ್ಗದ ಅರಶನ್ ದಕ್ಸಮ್ ಬಳಿ ಸಂಭವಿಸಿರುವುದಾಗಿ ವರದಿಯಾಗಿದೆ.

Advertisement

ಕೊಕರ್ನಾಗ್ ಉಪ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸುಹೀಲ್ ಅಹ್ಮದ್ ಲೋನ್ ಮಾಹಿತಿ ಪ್ರಕಾರ, ದಕ್ಸಮ್‌ನಿಂದ 20 ಕಿಮೀ ದೂರದಲ್ಲಿರುವ ಆರ್ಶುನ್ ಹಟ್ ಬಳಿ ಅಪಘಾತಕ್ಕೀಡಾಗಿದೆ ಈ ಅವಘಡದಲ್ಲಿ ಐವರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಓರ್ವ ಪುರುಷ ಮೃತಪಟ್ಟಿರುವುದಾಗಿ ಹೇಳಲಾಗಿದೆ.

ಕಾರು ಮದ್ವಾ ಕಿಶ್ತ್ವಾರ್‌ನಿಂದ ಬರುತಿತ್ತು ಈ ವೇಳೆ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದೆ ಎನ್ನಲಾಗಿದೆ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕೊಕರ್ನಾಗ್‌ನಲ್ಲಿರುವ ಆಸ್ಪತ್ರೆಗೆ ಸಾಗಿಸಲಾಗಿದ್ದು ಮೃತ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.

ಇದನ್ನೂ ಓದಿ: Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Advertisement
Advertisement

Udayavani is now on Telegram. Click here to join our channel and stay updated with the latest news.

Next