Advertisement

ಸೀಲ್ ಡೌನ್ ಮಾಡಿದ್ದರೂ ಹೊರ ಜಿಲ್ಲೆಗಳಿಂದ ಕುಕ್ಕೆಗೆ ವಾಹನಗಳ ಸಾಲು

10:04 AM Jun 16, 2021 | Team Udayavani |

ಸುಬ್ರಹ್ಮಣ್ಯ: ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗಿದ್ದರೂ ಹೊರ ಜಿಲ್ಲೆಗಳಿಂದ ಕುಕ್ಕೆಗೆ ಯಾತ್ರಿಕರು ಆಗಮಿಸುತ್ತಿರುವುದು ಕಂಡು ಬಂದಿದೆ.

Advertisement

ಸೋಮವಾರದಿಂದ ಸೀಲ್ ಡೌನ್ ಮಾಡಲಾಗಿದ್ದರೂ, ಪಂಚಾಯತಿ ವ್ಯಾಪ್ತಿಯ ಪ್ರವೇಶ ರಸ್ತೆಗಳನ್ನು ಬಂದ್ ಮಾಡಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತಗೊಂಡಿದೆ. ಆದರೆ ಕುಲ್ಕುಂದ ಭಾಗದಿಂದ ಕುಕ್ಕೆ ಕಡೆಗೆ ಯಾತ್ರಿಕರ ವಾಹನಗಳು ಆಗಮಿಸುತ್ತಿದೆ. ಅಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಲವು ವಾಹನಗಳನ್ನು ಆದೇಶದ ಬಗ್ಗೆ ಮಾಹಿತಿ ನೀಡಿ ಹಿಂದಕ್ಕೆ ಕಳುಹಿಸಿದ್ದಾರೆ. ದಂಡವೂ ವಿಧಿಸಲಾಗಿದೆ.

ಇದನ್ನೂ ಓದಿ:ವಿದೇಶಕ್ಕೆ ತೆರಳುವವರಿಗೆ ಈ ದಾಖಲೆಗಳನ್ನು ನೀಡಿದರೆ 28 ದಿನಕ್ಕೆ  2ನೇ ಡೋಸ್‌ ಲಸಿಕೆ

ಹೀಗಿದ್ದರೂ ಕೆಲವು ವಾಹಗಳು ಒಳ ರಸ್ತೆ ಮೂಲಕ ರಥ ಬೀದಿಗೆ ಬಂದಿವೆ ಎಂದು ವರದಿಯಾಗಿದೆ. ಸುಬ್ರಹ್ಮಣ್ಯ ಠಾಣಾಧಿಕಾರಿ ವಾಮನ ನೇತೃತ್ವದಲ್ಲಿ ಸಿಬ್ಬಂದಿಗಳು ಹಾಗೂ ಗೃಹರಕ್ಷಕ ಸಿಬ್ಬಂದಿ ಕರ್ತವ್ಯದಲ್ಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next