Advertisement

“ರೈತರಿಗೆ ನೀಡಿದ್ದು ನೋಟಿಸ್‌ ಅಲ್ಲ’ 

01:33 PM Oct 03, 2018 | |

ರಾಯಚೂರು: ರೈತರಿಗೆ ಸಾಲ ಮನ್ನಾ ಕುರಿತು ನೀಡುತ್ತಿರುವ ತಿಳಿವಳಿಕೆ ಪತ್ರವನ್ನೇ ನೋಟಿಸ್‌ ಎಂದು ತಪ್ಪಾಗಿ ಭಾವಿಸಲಾಗುತ್ತಿದೆ. ಈ ಬಗ್ಗೆ ರೈತರು ಯಾವುದೇ ಆತಂಕಗೊಳ್ಳುವುದು ಬೇಡ ಎಂದು ಪಶು ಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ತಿಳಿಸಿದರು.

Advertisement

ಮಂಗಳವಾರ ಮಹಾತ್ಮಾ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾವುದೇ ಬ್ಯಾಂಕ್‌ಗಳು ರೈತರಿಗೆ ನೋಟಿಸ್‌ ಕಳುಹಿಸಿಲ್ಲ. ದಾಖಲೆಗಳನ್ನು ಪರಿಶೀಲನೆ ನಡೆಸಿ ಅನಂತರ ಋಣಪತ್ರ ನೀಡಲಾಗುವುದು. ಸಿಎಂ ಕುಮಾರಸ್ವಾಮಿ ಅವರು ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸಾಲ ಮನ್ನಾದ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಗುತ್ತಿದೆ. ಅದನ್ನೇ ನೋಟಿಸ್‌ ಎಂದು ಭಾವಿಸಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next