Advertisement

Gangavathi ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೆಂಕಟೇಶ್ ಅಧಿಕಾರ ಸ್ವೀಕಾರ

01:40 PM Jul 12, 2023 | Team Udayavani |

ಗಂಗಾವತಿ: ಗಂಗಾವತಿಯ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

Advertisement

ವರ್ಗಾವಣೆಗೊಂಡಿರುವ ಬಿಇಒ ಬಿ. ಸೋಮಶೇಖರ ಗೌಡ ಅವರು ವೆಂಕಟೇಶ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ನೂತನ ಬಿಇಒ ವೆಂಕಟೇಶ್ ಉದಯವಾಣಿ ಜೊತೆ ಮಾತನಾಡಿ ಗಂಗಾವತಿ,ಕಾರಟಗಿ,ಕನಕಗಿರಿ ತಾಲೂಕುಗಳನ್ನು ಒಳಗೊಂಡಿದ್ದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಸರ್ಕಾರದ ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ಶೈಕ್ಷಣಿಕ ಪ್ರಗತಿಗೆ ಸಾಧಿಸಲು ಗುಣಮಟ್ಟದ ಶಿಕ್ಷಣಕ್ಕಾಗಿ ಶ್ರಮಿಸಲಾಗುತ್ತದೆ.

ಶಿಕ್ಷಕರ ಸಂಘದವರು ಮತ್ತು ಪಾಲಕರ ಸಹಕಾರದಲ್ಲಿ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ನಿರಂತರ ಒತ್ತು ನೀಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗ ಶಿಕ್ಷಕರ ಸಂಘದ ಪ್ರತಿನಿಧಿಗಳು ಸೇರಿ ಅನೇಕರಿದ್ದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next