Advertisement

ವೇಣು ಕೇಸ್‌ ರಾಜಕೀಯ ಪ್ರೇರಿತ: ಡಿಸಿಎಂ ಪರಮೇಶ್ವರ

06:00 AM Oct 24, 2018 | |

ಬಾಗಲಕೋಟೆ: ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಮೇಲೆ ರಾಜಕೀಯ ಪ್ರೇರಿತವಾಗಿ ರೇಪ್‌ ಕೇಸ್‌ ದಾಖಲಿಸಲಾಗಿದೆ. ಹೀಗಾಗಿ ಅದು ನಮ್ಮ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಉಪ ಮುಖ್ಯಮಂತ್ರಿ
ಡಾ| ಜಿ. ಪರಮೇಶ್ವರ ಹೇಳಿದರು.

Advertisement

ಸಾವಳಗಿಯಲ್ಲಿ ಉಪಚುನಾವಣೆ ನಿಮಿತ್ತ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇಣುಗೋಪಾಲ್‌
ಅವರ ಮೇಲಿನ ಪ್ರಕರಣ ಬೇರೆ ರಾಜ್ಯದಲ್ಲಿ ಆಗಿರುವಂತಹದ್ದು. ಅದರಿಂದ ರಾಜ್ಯದಲ್ಲಿ ಪಕ್ಷಕ್ಕೆ ಡ್ಯಾಮೇಜ್‌ ಆಗುವುದಿಲ್ಲ. 2012ರಲ್ಲಿ
ಆಗಿರುವ ಘಟನೆಯಿದು. ರಾಜಕೀಯ ಕಾರಣಕ್ಕಾಗಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಕಾನೂನು ಪ್ರಕಾರ ಪ್ರಕರಣ  ಎದುರಿಸುತ್ತಾರೆ. ಇದರಿಂದ ಕಾಂಗ್ರೆಸ್‌ಗೆ ಯಾವುದೇ ರೀತಿಯ ಹಿನ್ನಡೆಯಾಗಲ್ಲ. ಬಳ್ಳಾರಿಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮಧ್ಯೆ ಯಾವುದೇ ಗೊಂದಲವಿಲ್ಲ. ಅಲ್ಲಿನ ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆದು ಉಗ್ರಪ್ಪ ಅವರಿಗೆ ಟಿಕೆಟ್‌ ಕೊಡಲಾಗಿದೆ.
ಉಪಚುನಾವಣೆ ನಡೆದ ಕ್ಷೇತ್ರಗಳಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮಧ್ಯೆ ಅಪಸ್ವರವಿಲ್ಲ. ಮೇಲ್ಮಟ್ಟ ಅಥವಾ ಕೆಳ ಮಟ್ಟದಲ್ಲಿ ಯಾವ ಭಿನ್ನಾಭಿಪ್ರಾಯಗಳೂ ಇಲ್ಲ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next