Advertisement

ನೂತನ ಉಸ್ತುವಾರಿ ವೇಣುಗೋಪಾಲ್‌ ಕೂಡ ಸಮರ್ಥರು: ಪರಮೇಶ್ವರ್‌ 

12:03 PM May 02, 2017 | |

ಮಂಗಳೂರು: ರಾಜ್ಯ ಕಾಂಗ್ರೆಸ್‌ನ ನೂತನ ಉಸ್ತುವಾರಿ ವೇಣುಗೋಪಾಲ್‌ ಅವರು ಕೂಡ ಸಮರ್ಥ ವ್ಯಕ್ತಿ ಎಂದು  ರಾಜ್ಯ ಗೃಹಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್‌ ಹೇಳಿದ್ದಾರೆ. 

Advertisement

 ಮಂಗಳವಾರ ದ.ಕ. ಜಿಲ್ಲಾ ಪ್ರವಾಸದಲ್ಲಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಚುನಾವಣೆಯ ಹಿನ್ನಲೆಯಲ್ಲಿ  ದಿಗ್ವಿಜಯ್‌ ಸಿಂಗ್‌ ಅವರನ್ನು ಬದಲಾವಣೆ ಮಾಡಿರುವುದಾಗಿ ತಿಳಿಸಿದರು. 

ಕಾಂಗ್ರೆಸ್‌ನ ಹಿರಿಯ ಮುಖಂಡ ಎ.ವಿಶ್ವನಾಥ್‌ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎನ್ನುವುದು ಕೇವಲ ವದಂತಿ ಮಾತ್ರ. ಅವರು ಹಿರಿಯರು ಕಾಂಗ್ರೆಸ್‌ ಪಕ್ಷದಲ್ಲಿರಬೇಕು. ಮಾತುಕತೆ ನಡೆಸಿ ಸಮಸ್ಯೆ ಬಗೆ ಹರಿಸುವುದಾಗಿ ತಿಳಿಸಿದರು. 

ಇದೇ ವೇಳೆ ಹಿಂದೂ ಸಂಘಟನೆಯ ಕಾರ್ತಿಕ್‌ ರಾಜ್‌ ಹತ್ಯೆ ಕುರಿತು ಸಂಸದ ನಳಿನ್‌ ಕುಮಾರ ಕಟೀಲ್‌ ನೀಡಿದ ಹೇಳಿಕೆ ಖಂಡಿಸಿ ಕಿಡಿ ಕಾರಿದ ಅವರು ಸಂಸರದರಾದವರು ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದರು.

ಬೆಂಗಳೂರಿನಿಂದ ಸ್ಪೈಸ್‌ ಜೆಟ್‌ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ ಆಗಮಿಸಿದ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಸ್ವಾಗತಿಸಿದರು. 

Advertisement

ಮಂಗಳೂರು ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಮಂಗಳೂರು ಕಮಿಷನರೆಟ್‌ ಹಾಗೂ ಪಶ್ಚಿಮ ವಿಭಾಗದ ಪೊಲೀಸ್‌ಇಲಾಖಾಧಿಕಾರಿಗಳೊಂದಿಗೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. 

 ಇತ್ತೀಚೆಗೆ ಹತ್ಯೆಗೀಡಾದ ಕರೋಪಾಡಿ ಗ್ರಾ.ಪಂ. ಉಪಾಧ್ಯಕ್ಷ ಅಬ್ದುಲ್‌ ಜಲೀಲ್‌ ಮತ್ತು ಪಜೀರಿನ ಕಾರ್ತಿಕ್‌ ರಾಜ್‌ ಮನೆಗಳಿಗೆಗೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಲಿದ್ದಾರೆ. ಸಂಜೆ 7.35ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next