Advertisement

ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು

02:29 PM Jul 11, 2023 | Team Udayavani |

ವೇಣೂರು: ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ಅನಾದಿ ಕಾಲದಿಂದ ಆಚರಿಸಿಕೊಂಡು ಬರುತ್ತಿದ್ದ ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿರುವ ಘಟನೆ ನಡೆದಿದೆ.

Advertisement

ಬೆಳ್ತಂಗಡಿ-ಬಂಟ್ವಾಳ ತಾಲೂಕು ಗಡಿ ಭಾಗದಲ್ಲಿರುವ ಇಲ್ಲಿಯ ಬಾಡಾರು ಎಂಬಲ್ಲಿ ಜನವರಿ ತಿಂಗಳಿನಲ್ಲಿ ವರ್ಷಂಪ್ರತಿ ದೊಂಪದಬಲಿ ಉತ್ಸವ ಜರಗಿದ ಮರುದಿನ ಈ ಕೊರಗಜ್ಜನ ಗುಡಿಯಲ್ಲಿ ಸಾರ್ವಜನಿಕ ನೇಮೋತ್ಸವ ನಡೆಯುತ್ತ ಬರುತ್ತಿತ್ತು ಎನ್ನಲಾಗಿದೆ.

ಗುಡಿಯ ಜಾಗದ ವಿಚಾರ ಮತ್ತು ಆಡಳಿತದ ವಿಚಾರದಲ್ಲಿ ತಗಾದೆಗಳು ನಡೆಯುತ್ತಿತ್ತು ಎನ್ನಲಾಗಿದೆ.

ಇದೀಗ ಆರಾಧ್ಯ ಶಕ್ತಿ ಗುಡಿಗೆ ಬೆಂಕಿ ಇಟ್ಟಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದ್ದು, ತನಿಖೆಯಿಂದಷ್ಟೇ ಖಚಿತ ಮಾಹಿತಿ ತಿಳಿದು ಬರಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next