Advertisement

ವೇಣೂರು: ಮನೆಯ ಪಕ್ಕಾಸಿಗೆ ಚೂಡಿದಾರ ಶಾಲು ಬಿಗಿದು ಯುವತಿ ಆತ್ಮಹತ್ಯೆ

01:24 PM Feb 19, 2021 | Team Udayavani |

ವೇಣೂರು: ಇಲ್ಲಿನ ಕತ್ತೋಡಿಬೈಲು ನಿವಾಸಿ ವಿಠಲ ಆಚಾರ್ಯ ಅವರ ಪುತ್ರಿ ಸೌಮ್ಯಾ (19) ಅವರು ಮನೆಯ ಪಕ್ಕಾಸಿಗೆ ಚೂಡಿದಾರ ಶಾಲು ಬಿಗಿದು ಶುಕ್ರವಾರ ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

Advertisement

ಬೆಳ್ತಂಗಡಿ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿರುವ ಈಕೆ ಲಾಕ್‌ಡೌನ್ ಬಳಿಕ ತರಗತಿಗೆ ತೆರಳದೆ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ:ನಾವೂರು: ಕಮರಿಗೆ ಉರುಳಿದ ಕುರಿಗೊಬ್ಬರ ಸಾಗಾಟದ ಲಾರಿ

ಬೆಳಗ್ಗೆ ಎದ್ದು ಉಪಹಾರ ಸೇವಿಸಿದ್ದ ಸೌಮ್ಯ ಬಳಿಕ ಮನೆಯಲ್ಲಿ ಕಾಣಿಸಿಕೊಂಡಿರಲಿಲ್ಲ. 9 ಗಂಟೆಯ ಸುಮಾರಿಗೆ ಮನೆ ಮಂದಿ ಮೇಲ್ಛಾವಣಿಯನ್ನು ಗಮನಿಸಿದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೇಣೂರು ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next