Advertisement

ಮಂಗಳೂರು: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ

09:38 AM Nov 13, 2019 | keerthan |

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಯುತ್ತಿದ್ದು, ಈ ನಡುವೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿಕ ಚಕಮಕಿ ನಡೆದ ಘಟನೆ ವರದಿಯಾಗಿದೆ.

Advertisement

ನಗರದ ಫಳ್ನೀರ್ ವಾರ್ಡ್ ನ ಜೆಪ್ಪುನಲ್ಲಿ ಘಟನೆ ವರದಿಯಾಗಿದೆ.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ತಮ್ಮ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಒತ್ತಾಯ ನಡೆಸುತ್ತಿದ್ದರು. ಚುನಾಯಿತ ಪ್ರತಿನಿಧಿಗಳು ಮತಗಟ್ಟೆ ಬಳಿ ಹಾಜರಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಮತದಾರರನ್ನು ಸೆಳೆಯಲು ನಾವು ಶಾಸಕರು ಹಾಗೂ ಸಂಸದರನ್ನು ಸ್ಥಳಕ್ಕೆ ಕರೆಯುತ್ತೆವೆ ಎಂದ ಬಿಜೆಪಿ ಕಾರ್ಯಕರ್ತರು ಐವನ್ ಡಿಸೋಜ ವಿರುದ್ಧ ಗರಂ ಆದ ಘಟನೆ ವರದಿಯಾಗಿದೆ.

ಮಧ್ಯ ಪ್ರವೇಶಿಸಿದ ಪೊಲೀಸರುಮತದಾರರಿಗೆ ಮುಕ್ತವಾಗಿ ಮತಚಲಾಯಿಸುವಂತೆ ಅವಕಾಶ ಮಾಡಿಕೊಡಬೇಕು ಎಂದು ಎರಡು ಪಕ್ಷದ ಮುಖಂಡರಿಗೆ ಸೂಚನೆ ನೀಡಿದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next