Advertisement

ನಮಗೆ ಬಂದ ಅರ್ಜಿ ಪರಿಗಣಿಸಿ ಚುನಾವಣ ಆಯೋಗಕ್ಕೆ ದಿಲ್ಲಿ ಹೈಕೋರ್ಟ್ ಸೂಚನೆ

10:04 AM Jan 15, 2020 | Team Udayavani |

ಹೊಸದಿಲ್ಲಿ: 2019ರ ಲೋಕಸಭೆ ಚುನಾವಣೆ ವೇಳೆ ಇವಿಎಂಗಳ ಮತ ದೃಢೀಕರಣ ಪತ್ರಗಳ ಪರಿಶೀಲನೆ ನಡೆಸಬೇಕು ಎಂದು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಬೇಕು ಎಂದು ದಿಲ್ಲಿ ಹೈಕೋರ್ಟ್‌ ಚುನಾವಣ ಆಯೋಗಕ್ಕೆ ಸೂಚಿಸಿದೆ.

Advertisement

ಮುಖ್ಯ ನ್ಯಾ| ಡಿ.ಎನ್‌. ಪಟೇಲ್‌ ಮತ್ತು ನ್ಯಾ| ಸಿ. ಹರಿಶಂಕರ್‌ ಅವರನ್ನೊಳಗೊಂಡ ನ್ಯಾಯಪೀಠ, 373 ಕ್ಷೇತ್ರಗಳಲ್ಲಿ ನಡೆಸಲಾಗಿರುವ ಮತ ಎಣಿಕೆಗೂ, ಚುನಾವಣ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿ ಕೊಂಡ ಮಾಹಿತಿಗಳಿಗೂ ಭಾರೀ ವ್ಯತ್ಯಾಸವಿದೆ. ಹೀಗಾಗಿ, ಅದನ್ನು ಮತ್ತೂಮ್ಮೆ ಪರಿಶೀಲಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು. ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯನ್ನೇ ಪರಿಗಣಿಸಿ, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಚುನಾವಣ ಆಯೋಗಕ್ಕೆ ಸೂಚಿಸಿ ಪ್ರಕರಣ ನ್ಯಾಯಪೀಠ ಸೋಮವಾರ ಇತ್ಯರ್ಥಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next