Advertisement

ಸಿಲಿಂಡರ್‌ ಬೆಲೆ ಏರಿಕೆ: ಸರಕಾರ ಜನರ ಗಾಯದ ಮೇಲೆ ಬರೆ ಎಳೆದಿದೆ; ವೆರೋನಿಕಾ ಕರ್ನೆಲಿಯೋ

03:52 PM Jul 06, 2022 | Team Udayavani |

ಉಡುಪಿ: ಅಡುಗೆ ಅನಿಲದ ಮೇಲೆ ಇಂದಿನಿಂದ ರೂ. 50/- ಬೆಲೆ ಏರಿಕೆ ಮಾಡಿ ಬಿಜೆಪಿ ಸರಕಾರ ಜನರ ಗಾಯದ ಮೇಲೆ ಬರೆ ಎಳೆದಿದೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಜನ ಆರ್ಥಿಕ ಸಂಕಷ್ಟದಲ್ಲಿ ಇರುವಾಗ ದಿನನಿತ್ಯ ಬಳಕೆಯ ಅಡುಗೆ ಅನಿಲದ ಬೆಲೆಯನ್ನು ಏಕಾಏಕಿ 50 ರೂ ಏರಿಸಿರುವುದು ಖಂಡನೀಯ. ಈಗಾಗಲೇ ಒಂದು ಸಿಲಿಂಡರ್ ಗೆ 1020 ರು ತೆರುತ್ತಿದ್ದು ಇನ್ನು ಮುಂದೆ 1070 ತೆರಬೇಕಾಗುತ್ತೆ. ಜನ ಕೆಲಸಗಳಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಬೆಲೆ ಏರಿಸುವ ಸರಕಾರಕ್ಕೆ ಕಣ್ಣು ಕಿವಿ ಯಾವುದೂ ಇಲ್ಲವೇ? ಜನರಿಂದ ಆಯ್ಕೆಯಾದ ಸರಕಾರ ಯಾಕೆ ಜನರನ್ನು ಈ ರೀತಿ ಲೂಟಿ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಮಾದ್ಯಮ ವರದಿಗಳ ಪ್ರಕಾರ ನಿರುದ್ಯೋಗ ಸಮಸ್ಯೆ 7.8% ಗೆ ತಲುಪಿದ್ದು ಗರಿಷ್ಠ ಏರಿಕೆ ಕಂಡಿದೆ. ಮಳೆಗಾಲ ಆರಂಭವಾಗಿದ್ದು ಜನ ಒಪ್ಪುತ್ತಿನ ಊಟ ಕ್ಕೇ ಕಷ್ಟಪಡುತ್ತಿರುವಾಗ ಈ ರೀತಿಯ ಬೆಲೆ ಏರಿಕೆ ಜನರ ತಾಳ್ಮೆಯನ್ನು ಪರೀಕ್ಷಿಸುತ್ತಿದೆ. ಸರಕಾರ ತಕ್ಷಣ ಈ ಬೆಲೆಯನ್ನು ಇಳಿಕೆ ಮಾಡಿ ಜನರನ್ನು ನೆಮ್ಮದಿಯಿಂದ ಬದುಕಲು ಬಿಡಬೇಕಾಗಿ ಆಗ್ರಹಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next