Advertisement

ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ನಟ ರಾಜ್ ದೀಪ ನಾಯ್ಕ್

04:44 PM Oct 16, 2021 | Team Udayavani |

ಪಣಜಿ: ಖ್ಯಾತ ನಟ ಹಾಗೂ ನಿರ್ದೇಶಕ ರಾಜ್ ದೀಪ ನಾಯ್ಕ್ ರವರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರವರ ಉಪಸ್ಥಿತಿಯಲ್ಲಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಪ್ರವೇಶಿಸಿದರು.

Advertisement

ಗೋವಾದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ, ಕರೋನಾ ಮಹಾಮಾರಿಯ ಸಂಕಷ್ಟ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಜನತೆಗೆ ಕೇವಲ ಆಮ್ ಆದ್ಮಿ ಪಕ್ಷ ಮಾತ್ರ ಸಹಾಯ ಮಾಡಲು ಮುಂದೆ ಬಂದಿದೆ ಎಂದು ರಾಜ್ ದೀಪ ನಾಯ್ಕ್ ನುಡಿದರು.

ಅರವಿಂದ ಕೇಜರಿವಾಲ್ ರವರ ಆಮ್ ಆದ್ಮಿ ಪಕ್ಷಕ್ಕೆ ಸೇರಲು ನನಗೆ ಆನಂದವಾಗುತ್ತಿದೆ. ಕಳೆದ ಎರಡು ವರ್ಷಗಳ ಕಾಲ ಕರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ಜನತೆ ಹೆಚ್ಚಿನ ಆರ್ಥಿಕ ಸಂಕಷ್ಟ ಪರಿಸ್ಥಿತಿ ಎದುರಿಸುವಂತಾಗಿದೆ. ಗೋವಾದಲ್ಲಿ ಜನತೆ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸಹಾಯ ಮಾಡಿರುವ ಏಕೈಕ ಪಕ್ಷ ಆಮ್ ಆದ್ಮಿ ಪಕ್ಷವಾಗಿದೆ ಎಂದು ರಾಜ್ ದೀಪ ನಾಯ್ಕ್ ನುಡಿದರು.

Advertisement

Udayavani is now on Telegram. Click here to join our channel and stay updated with the latest news.

Next