Advertisement

ಹೃದಯಾಘಾತದಿಂದ ಮಹೇಶ್‌ ಬಾಬು ತಂದೆ, ತೆಲುಗು ಚಿತ್ರರಂಗದ ಹಿರಿಯ ನಟ ಕೃಷ್ಣ ನಿಧನ

07:57 AM Nov 15, 2022 | Team Udayavani |

ಹೈದರಾಬಾದ್ : ತೆಲುಗಿನ ಸೂಪರ್‌ಸ್ಟಾರ್‌, ನಟ ಮಹೇಶ್‌ಬಾಬು ಅವರ ತಂದೆ ಕೃಷ್ಣ ಅವರು ಹೃದಯಾಘಾತದಿಂದ ಮಂಗಳವಾರ ಮುಂಜಾನೆ 4 ಗಂಟೆ ಸುಮಾರಿಗೆ ಹೈದರಾಬಾದ್ ನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

Advertisement

ಅವರಿಗೆ 80 ವರ್ಷ ವಯಸ್ಸಾಗಿತ್ತು, ಕೃಷ್ಣ ಅವರಿಗೆ ಸೋಮವಾರ ಬೆಳಗ್ಗೆ 1.15ಕ್ಕೆ ಸುಮಾರಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಮಂಗಳವಾರ ಮುಂಜಾನೆ ಚಿಕಿತ್ಸೆ ಫಲಿಸದೆ ನಿಧನಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತೆಲುಗು ಚಿತ್ರರಂಗದ ಹಿರಿಯ ನಟರಾಗಿದ್ದ ಶ್ರೀ ಕೃಷ್ಣ ಅವರು ಸುಮಾರು 350 ಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ಆ ಕಾಲದ ಅಗ್ರ ನಟರಲ್ಲಿ ಒಬ್ಬರಾಗಿದ್ದರು. ಅಲ್ಲದೆ ಅವರು ನಿರ್ದೇಶಕ ಮತ್ತು ನಿರ್ಮಾಪಕರೂ ಆಗಿದ್ದರು. ಅವರಿಗೆ 2009 ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶ್ರೀ ಕೃಷ್ಣ ಅವರು ನಟ ಮಹೇಶ್ ಬಾಬು ಅವರ ತಂದೆ ಮತ್ತು ಟಿಡಿಪಿ ನಾಯಕ ಜಯ್ ಗಲ್ಲಾ ಅವರ ಮಾವ. ಅವರು 1980 ರ ದಶಕದಲ್ಲಿ ಕಾಂಗ್ರೆಸ್ ಸೇರಿ ಸಂಸದರಾದರು ಆದರೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮರಣದ ನಂತರ ರಾಜಕೀಯವನ್ನು ತೊರೆದರು.

ಎರಡು ತಿಂಗಳ ಹಿಂದೆ ಪತ್ನಿ ನಿಧನ :
ಅವರ ಪತ್ನಿ ಮತ್ತು ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಈ ವರ್ಷದ ಸೆಪ್ಟೆಂಬರ್‌ನಲ್ಲಿ ನಿಧನರಾದರು. ಅವರ ಹಿರಿಯ ಮಗ ರಮೇಶ್ ಬಾಬು ಜನವರಿಯಲ್ಲಿ ನಿಧನರಾದರು.

Advertisement

ಇದನ್ನೂ ಓದಿ :4 ವರ್ಷ ಬಳಿಕ ಕೊಲೆ ರಹಸ್ಯ ಬಯಲು; ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆ

Advertisement

Udayavani is now on Telegram. Click here to join our channel and stay updated with the latest news.

Next