Advertisement

ಹಿರಿಯ ಚಲನಚಿತ್ರ ನಿರ್ಮಾಪಕ ಕೆ ಮುರಳೀಧರನ್ ನಿಧನ

09:49 AM Dec 02, 2022 | Team Udayavani |

ದಕ್ಷಿಣ ಚಿತ್ರರಂಗದ ನಿರ್ಮಾಪಕ ಕೆ. ಮುರಳೀಧರನ್ ಹೃದಯಾಘಾತದಿಂದ ನಿಧನರಾದರು. ಅವರು ತಮಿಳುನಾಡಿನ ಕುಂಭಕೋಣಂನಲ್ಲಿರುವ ತಮ್ಮ ಸ್ವಗ್ರಾಮದಲ್ಲಿ ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ಮುರಳೀಧರನ್ ಅವರು ತಮಿಳು ನಿರ್ಮಾಪಕರ ಮಂಡಳಿಯ ಮಾಜಿ ಅಧ್ಯಕ್ಷರೂ ಆಗಿದ್ದರು. ಅವರ ಪಾಲುದಾರರಾದ ದಿ| ವಿ. ಸ್ವಾಮಿನಾಥನ್ ಮತ್ತು ಜಿ. ವೇಣುಗೋಪಾಲ್ ರ ಸಹಯೋಗದಲ್ಲಿ ಲಕ್ಷ್ಮಿ ಮೂವೀ ಮೇಕರ್ಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭಿಸಿದರು.

ಈ ನಿರ್ಮಾಣ ಸಂಸ್ಥೆಯ ಮೂಲಕ ಅಂಬೆ ಶಿವಂ, ಪುದುಪೆಟ್ಟೈ ಮತ್ತು ಬಾಗಾವತಿಯಂತಹ ಹಲವಾರು ಪ್ರಮುಖ ಹಿಟ್‌ ಚಿತ್ರಗಳನ್ನು ಮಾಡಿದರು. ಈ ನಿರ್ಮಾಣ ಸಂಸ್ಥೆ ನಿರ್ಮಿಸಿದ ಕೊನೆ ಚಿತ್ರ ಸಕಲಕಲಾ ವಲ್ಲವನ್ ನಲ್ಲಿ ಜಯಂ ರವಿ, ತ್ರಿಷಾ ಮತ್ತು ಅಂಜಲಿ ನಟಿಸಿದ್ದರು. ಇದು 2015 ರಲ್ಲಿ ಬಿಡುಗಡೆಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next