Advertisement

ಖ್ಯಾತ ಪತ್ರಕರ್ತ, ಪದ್ಮಶ್ರೀ ವಿನೋದ್ ದುವಾ ವಿಧಿವಶ

06:27 PM Dec 04, 2021 | Team Udayavani |

ನವದೆಹಲಿ: ಹಿರಿಯ ಪತ್ರಕರ್ತ ವಿನೋದ್ ದುವಾ ಅವರು ದೀರ್ಘಕಾಲದ ಅನಾರೋಗ್ಯದಿಂದ ಶನಿವಾರ ಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Advertisement

ಕೋವಿಡ್ ಸೋಂಕಿನ ನಂತರ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 67 ವರ್ಷದ ಪತ್ರಕರ್ತ ದುವಾ ಅವರನ್ನು ಕಳೆದ ವಾರ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು.

ತಂದೆ ಸಾವನ್ನಪ್ಪಿದ್ದಾರೆ ಎಂದು ಪುತ್ರಿ ಮಲ್ಲಿಕಾ ದುವಾ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಖಚಿತಪಡಿಸಿದ್ದಾರೆ.

ವಿನೋದ್ ದುವಾ ದೂರದರ್ಶನ ಮತ್ತು ಎನ್ ಡಿಟಿವಿ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅನುಭವಿ ಪತ್ರಕರ್ತರಾಗಿದ್ದರು.

1996 ರಲ್ಲಿ, ಅವರು ಗೌರವಾನ್ವಿತ ರಾಮನಾಥ್ ಗೋಯೆಂಕಾ ಪತ್ರಿಕೋದ್ಯಮ ಪ್ರಶಸ್ತಿಯನ್ನು ಪಡೆದ ಮೊದಲ ಎಲೆಕ್ಟ್ರಾನಿಕ್ ಮಾಧ್ಯಮ ಪತ್ರಕರ್ತರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

Advertisement

2008 ರಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next