Advertisement

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಸ್ಥಳದಲ್ಲೇ ಮೃತ್ಯು

10:07 AM Jun 09, 2023 | Team Udayavani |

ಚೆನ್ನೈ: ತಮಿಳಿನ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಅವರ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಶರಣ್‌ ರಾಜ್‌ (26) ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Advertisement

ಗುರುವಾರ (ಜೂ.8 ರಂದು) ರಾತ್ರಿ 11:30 ರ ಹೊತ್ತಿಗೆ ಕೆ.ಕೆ. ನಗರ್‌ ನಲ್ಲಿ ತನ್ನ ಬೈಕ್‌ ನಲ್ಲಿ ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಅವರ ಬೈಕ್‌ ಗೆ ಢಿಕ್ಕಿ ಹೊಡಿದಿದೆ. ಪರಿಣಾಮ ತೀವ್ರ ಸ್ವರೂಪದಲ್ಲಿ ಗಾಯಗೊಂಡ ಶರಣ್‌ ರಾಜ್‌ ಸ್ಥಳದಲ್ಲೇ ಪ್ರಾಣ ತೆತ್ತಿದ್ದಾರೆ.

ಇದನ್ನೂ ಓದಿ: Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು 

ಸ್ಥಳೀಯರು ಕೂಡಲೇ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾಲಿವುಡ್‌ ನಲ್ಲಿ ಸಹನಟನಾಗಿ ಗುರುತಿಸಿಕೊಂಡಿರುವ ಪಳನಿಯಪ್ಪನ್ ಅವರ ಕಾರು ಅಪಘಾತವನ್ನು ಎಸೆಗಿದೆ ಎನ್ನಲಾಗಿದೆ. ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಪರಿಣಾಮ ಈ ಘಟನೆ ನಡೆದಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಪಳನಿಯಪ್ಪನ್ ಅವರನ್ನು ಬಂಧಿಸಲಾಗಿದೆ.

ಭಾರತೀಯ ಸಿನಿಮಾರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ನಿರ್ದೇಶಕ ವೆಟ್ರಿಮಾರನ್ ಅವರ ಸಿನಿಮಾಗಳಾದ ʼ ವಡಾ ಚೆನ್ನೈʼ ಹಾಗೂ ʼಅಸುರನ್‌ʼ ಸಿನಿಮಾದಲ್ಲಿ ಶರಣ್‌ ರಾಜ್‌ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ. ʼಅಸುರನ್‌ʼ ಸಿನಿಮಾದಲ್ಲಿ ಪೋಷಕ ಪಾತ್ರದಲ್ಲೂ ಅವರು ನಟಿಸಿದ್ದಾರೆ.

Advertisement

ಶರಣ್‌ ರಾಜ್‌ ಅವರ ಹಠಾತ್‌ ನಿಧನಕ್ಕೆ ಕಾಲಿವುಡ್‌ ಕಂಬನಿ ಮಿಡಿದಿದೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next