Advertisement

ವಿಜಿ ಸಿದ್ದಾರ್ಥ ನಾಪತ್ತೆ; ಎಸ್ ಎಂ ಕೃಷ್ಣ ಮನೆಯಲ್ಲಿ ನೀರವ ಮೌನ, ಗಣ್ಯರ ಭೇಟಿ

09:14 AM Jul 31, 2019 | Team Udayavani |

ಬೆಂಗಳೂರು: ಮಾಜಿ ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅಳಿಯ, ಕಾಫಿ ಡೇ ಮಾಲಕ ವಿಜಿ ಸಿದ್ದಾರ್ಥ ನಿಗೂಢವಾಗಿ ನಾಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆಯೇ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಗಣ್ಯಾತೀಗಣ್ಯರು ಭೇಟಿ ನೀಡಿದ್ದಾರೆ.

Advertisement

ಸಿದ್ದಾರ್ಥ ಪತ್ತೆಗೆ ಸೇನಾ ಹೆಲಿಕಾಪ್ಟರ್ ಕಾರ್ಯಾಚರಣೆ ಸಾಧ್ಯತೆ ಬಗ್ಗೆ ಅಧಿಕಾರಿಗಳ ಜತೆ ಸಿಎಂ ಯಡಿಯೂರಪ್ಪ ಸಮಾಲೋಚನೆ ನಡೆಸಿದ್ದಾರೆ.

ಇದನ್ನೂ ಓದಿ: ಎಸ್ ಎಂಕೆ ಅಳಿಯ ನಾಪತ್ತೆ ನಿಗೂಢ; ಸಿದ್ದಾರ್ಥ ಬರೆದಿಟ್ಟ ಪತ್ರದಲ್ಲಿ ಕಾರಣ ಬಹಿರಂಗ

ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೃಷ್ಣ ಅವರ ಮನೆಗೆ ಭೇಟಿ ನೀಡಿ, ಘಟನೆಯ ಮಾಹಿತಿ ನೀಡಿ, ಶೋಧ ಕಾರ್ಯಾಚರಣೆ ಕುರಿತು ವಿವರಿಸಿದ್ದಾರೆ ಎಂದು ವರದಿ ತಿಳಿಸಿದೆ.

ನಟ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಸೇರಿದಂತೆ ಚಿತ್ರರಂಗದ ಗಣ್ಯರು ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ.

Advertisement

ತದನಂತರ ಕಾಂಗ್ರೆಸ್ ಹಿರಿಯ ಮುಖಂಡ ಬಿಎಲ್ ಶಂಕರ್, ಡಿಕೆ ಶಿವಕುಮಾರ್, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದ್ದಾರೆ ಎಂದು ವರದಿ ವಿವರಿಸಿದೆ.

ಈಗಾಗಲೇ ಉಳ್ಳಾಲ ಸಮೀಪದ ನೇತ್ರಾವತಿ ನದಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮುಳುಗು ತಜ್ಞರು ಕೂಡ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಪೊಲೀಸರು ಕೂಡಾ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next