Advertisement

ದಾಳಿಗೆ ಉಪ ರಾಷ್ಟ್ರಪತಿ ಖಂಡನೆ

09:18 AM Apr 23, 2019 | Lakshmi GovindaRaju |

ಬೆಂಗಳೂರು: ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್‌ ಸ್ಫೋಟ ದುರ್ಘ‌ಟನೆಯನ್ನು ತೀವ್ರವಾಗಿ ಖಂಡಿಸಿರುವ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು, “ಭಯೋತ್ಪಾದನೆಯು ಇಡೀ ಮಾನವ ಕುಲದ ಮುಂದಿರುವ ಸವಾಲು. ಇದರಿಂದ ಮುಕ್ತವಾಗಲು ಎಲ್ಲರೂ ಒಗ್ಗೂಡಬೇಕು’ ಎಂದು ಕರೆ ನೀಡಿದ್ದಾರೆ.

Advertisement

ನಗರದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಬೆಂಗಳೂರು ವಿವಿ 54ನೇ ಘಟಿಕೋತ್ಸವದಲ್ಲಿ ಮಾತನಾಡಿ, “ಭಾರತ ಮಾತ್ರವಲ್ಲ; ಯಾವ ದೇಶವೂ ಈಗ ಸುರಕ್ಷಿತವಾಗಿಲ್ಲ. ಭಯೋತ್ಪಾದನೆ ನಿಗ್ರಹ ಮಾಡುವುದರ ಜತೆಗೆ ಇದಕ್ಕೆ ಬೆಂಬಲವಾಗಿ ನಿಂತಿರುವ ದುಷ್ಟ ಶಕ್ತಿಗಳನ್ನೂ ಮಟ್ಟಹಾಕಬೇಕು’ ಎಂದರು.

ಶ್ರೀಲಂಕಾದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡೇ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಈ ಹಿಂದೆ ಬೆಂಗಳೂರು, ಹೈದರಾಬಾದ್‌, ಮುಂಬೈ ಕೂಡ ಭಯೋತ್ಪಾದಕರ ದಾಳಿಗೆ ತುತ್ತಾಗಿವೆ. ಇದು ಇಡೀ ಮಾನವಕುಲಕ್ಕೆ ದೊಡ್ಡ ಸವಾಲಾಗಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next