Advertisement

ವಿಜಯನಗರಕ್ಕೆ ಬಂದಿಳಿದ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ದಂಪತಿ

06:04 PM Aug 20, 2021 | Team Udayavani |

ಹೊಸಪೇಟೆ :ತುಂಗಾಭದ್ರಾ ಜಲಾಶಯ,ಹಂಪಿಯ ವಿಶ್ವ ಪಾರಂಪರಿಕ ತಾಣಗಳನ್ನು ವೀಕ್ಷಿಸಲು ಉಪರಾಷ್ಟ್ರಪತಿಗಳಾದ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಧರ್ಮಪತ್ನಿ ಎಂ.ಉಷಾ ಅವರು ವಿಜಯನಗರ ಜಿಲ್ಲಾ ಕೇಂದ್ರವಾದ ಹೊಸಪೇಟೆಯ ಮುನ್ಸಿಪಲ್ ಮೈದಾನಕ್ಕೆ ವಾಯುಪಡೆಯ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಶುಕ್ರವಾರ ಸಂಜೆ ಬಂದಿಳಿದರು.

Advertisement

ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರಿಗೆ ಪರಿಸರ, ಜೀವಿಶಾಸ್ತ್ರ, ಪ್ರವಾಸೋದ್ಯಮ ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್  ಸ್ವಾಗತ‌ ಕೋರಿದರು.

ಕೊಪ್ಪಳ ಸಂಸದ ಸಂಗಣ್ಣ ಕರಡಿ, ಕಲಬುರಗಿ ವಿಭಾಗೀಯ ಪ್ರಾದೇಶಿಕ ಆಯುಕ್ತ ಎನ್.ವಿ.ಪ್ರಸಾದ್, ಐಜಿಪಿ ಮನಿಷ್ ಖರ್ಬಿಕರ್,ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ,ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ,ಅಪರ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ಮತ್ತಿತರರು ಇದ್ದರು.

ಇದನ್ನೂ ಓದಿ:ಜಲಕ್ರೀಡೆಗಿಲ್ಲ ಅನುಮತಿ-ನೆಲಕಚ್ಚಿದ ಪ್ರವಾಸೋದ್ಯಮ 

ನಂತರ ಉಪರಾಷ್ಟ್ರಪತಿಗಳಾದ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಧರ್ಮಪತ್ನಿ ಎಂ.ಉಷಾ ಅವರು ತುಂಗಾಭದ್ರಾ ಜಲಾಶಯದ ಸೌಂದರ್ಯ ಮತ್ತು ಜಲಧಾರೆ ಕಣ್ತುಂಬಿಕೊಳ್ಳಲು ತೆರಳಿದರು.

Advertisement

ಉಪರಾಷ್ಟ್ರಪತಿಗಳು ಭೇಟಿ ಹಿನ್ನೆಲೆ ನಗರದಾದ್ಯಂತ ಬೀಗಿಬಂದೋಬಸ್ತ್ ಕೈಗೊಳ್ಳಲಾಗಿತ್ತು. ಉಪರಾಷ್ಟ್ರಪತಿಗಳು ರಸ್ತೆ ಮಾರ್ಗವಾಗಿ ತುಂಗಭದ್ರಾ ಜಲಾಶಯಕ್ಕೆ ತೆರಳುತ್ತಿರುವ  ರಸ್ತೆಯುದ್ದಕ್ಕೂ ಸಾರ್ವಜನಿಕರು‌ ನಿಂತು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅನೇಕರು ವಿಡಿಯೋ‌ ಹಾಗೂ   ಫೋಟೊ ಚಿತ್ರಿಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next