Advertisement

ನವದಂಪತಿಗೆ ಶುಭ ಕೋರಿದ ಉಪರಾಷ್ಟ್ರ ಪತಿ

02:56 PM Aug 23, 2021 | Team Udayavani |

ಹುಬ್ಬಳ್ಳಿ: ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ರವಿವಾರ ಹಂಪಿ ಪ್ರವಾಸ ಮುಗಿಸಿಕೊಂಡು ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

Advertisement

ನಂತರ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಹಿರಿಯ ಸಹೋದರ ಗೋವಿಂದ ಜೋಶಿಯವರ ಪುತ್ರ ಅಭಯ ಅವರ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ನವ ದಂಪತಿಗೆ ಶುಭ ಕೋರಿದರು.

ವಾಯುಸೇನೆಯ ಹೆಲಿಕಾಪ್ಟರ್‌ನಲ್ಲಿ ಬೆಳಗ್ಗೆ 9:50ರ ಸುಮಾರಿಗೆ ಆಗಮಿಸಿದ ಅವರನ್ನು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಹು-ಧಾ ಪೊಲೀಸ್‌ ಆಯುಕ್ತ ಲಾಭೂ ರಾಮ್‌ ಪುಸ್ತಕ ಕೊಟ್ಟು ಬರಮಾಡಿಕೊಂಡರು.

ನಂತರ ಗೋಕುಲ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡ ನಾಯ್ಡು, ನವ ವಧು-ವರರಿಗೆ ಆಶೀರ್ವದಿಸಿದರು. 10 ನಿಮಿಷದ ಬಳಿಕ ನೇರವಾಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಕುಟುಂಬ ಸಮೇತ ದೆಹಲಿಗೆ ಪ್ರಯಾಣ ಬೆಳೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next