Advertisement

ಜುಲೈ ಅಂತ್ಯದೊಳಗೆ ಸಂತ್ರಸ್ತರಿಗೆ ಮನೆ ಹಸ್ತಾಂತರ

11:16 PM Jun 29, 2019 | Team Udayavani |

ಮಡಿಕೇರಿ: ಕೊಡಗಿನ ಮಳೆಹಾನಿ ಸಂತ್ರಸ್ತರಿಗೆ ಜುಲೈ ಅಂತ್ಯದೊಳಗೆ ನೂತನ ಮನೆಗಳನ್ನು ಹಸ್ತಾಂತರಿಸಲಾಗುವುದು ಎಂದು ರಾಜ್ಯ ವಸತಿ ಸಚಿವ ಎಂ.ಟಿ.ಬಿ.ನಾಗರಾಜ್‌ ಭರವಸೆ ನೀಡಿದ್ದಾರೆ. ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದಲ್ಲಿ ಸಂತ್ರಸ್ತರಿಗಾಗಿ ನಿರ್ಮಿಸಲಾಗುತ್ತಿರುವ ಮನೆಗಳ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

ಈ ವೇಳೆ ಮಾತನಾಡಿ, ರಾಜ್ಯ ಸರಕಾರ ಸಂತ್ರಸ್ತರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದ್ದು, ನೆಲೆ ಕಳೆದುಕೊಂಡ ಪ್ರತಿ ಕುಟುಂಬಕ್ಕೂ ಮನೆ ನಿರ್ಮಿಸಿಕೊಡಬೇಕೆನ್ನುವುದೇ ನಮ್ಮ ಉದ್ದೇಶ. ಕಾಮಗಾರಿ ವಿಳಂಬವಾದರೂ ಗುಣಮಟ್ಟದ ಮನೆಗಳನ್ನೇ ನಿರ್ಮಿಸಲಾಗಿದೆ. ಮೂಲ ಸೌಲಭ್ಯಗಳನ್ನು ಒದಗಿಸಿದ ತಕ್ಷಣ ಮನೆಗಳ ಹಸ್ತಾಂತರವಾಗಲಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next