Advertisement

ಬಿಜೆಪಿ ಸರ್ಕಾರದ ಸಾಧನೆಯಿಂದ ಗೆಲುವು: ನರಿಬೋಳ

11:32 AM Dec 06, 2021 | Team Udayavani |

ಜೇವರ್ಗಿ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳೇ ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು.

Advertisement

ತಾಲೂಕಿನ ಅಂಕಲಗಾ, ಇಟಗಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಸದಸ್ಯರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡುವ ಮೂಲಕ ಈ ಭಾಗದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುತ್ತಿದೆ ಎಂದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ನೀಡಿರುವ 1500 ಕೋಟಿ ರೂ. ಅನುದಾನ ಖರ್ಚು ಮಾಡಿದರೆ, ಹೆಚ್ಚುವರಿಯಾಗಿ 1500 ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದ್ದಾರೆ. ಕಳೆದ 60 ವರ್ಷ ಕಾಲ ಕಾಂಗ್ರೆಸ್‌ ಸರ್ಕಾರ ನೀಡಿದ ಆಡಳಿತ ನೋಡಿ ಜನತೆ ಬೇಸತ್ತು ಹೋಗಿದ್ದಾರೆ. ಆದ್ದರಿಂದ ಸರಳ ಸಜ್ಜನಿಕೆಗೆ ಹೆಸರಾದ ಬಿ.ಜಿ.ಪಾಟೀಲ ಗೆಲುವಿಗೆ ಮುಖಂಡರು ಶ್ರಮಿಸಬೇಕು ಎಂದರು.

ಕಳೆದ ಆರು ವರ್ಷ ವಿಧಾನ ಪರಿಷತ್‌ ಸದಸ್ಯರಾಗಿ ಬಿ.ಜಿ.ಪಾಟೀಲ ಸಾಕಷ್ಟು ಕೆಲಸ ನಿರ್ವಹಿಸಿದ್ದು, ಅವರ ಗೆಲುವು ನಿಶ್ಚಿತ ಎಂದು ಹೇಳಿದರು. ಮುಖಂಡರಾದ ರಮೇಶ ಬಾಬು ವಕೀಲ, ಶರಣಪ್ಪ ತಳವಾರ, ಧರ್ಮಣ್ಣ ದೊಡ್ಡಮನಿ, ತಾಲೂಕು ಅಧ್ಯಕ್ಷ ಭೀಮರಾವ್‌ ಗುಜಗೊಂಡ, ಮಲ್ಲಿನಾಥಗೌಡ ಯಲಗೋಡ, ಎಂ.ಬಿ.ಪಾಟೀಲ ಹರವಾಳ, ಶೋಭಾ ಬಾಣಿ, ಧರ್ಮಣ್ಣ ಇಟಗಾ, ಭಾಗೇಶ ಹೋತಿನಮಡು ಹಾಗೂ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next