Advertisement

ರೈತರ ಹೋರಾಟಕ್ಕೆ ಸಂದ ಜಯ: ಪೂಜಾರಿ

01:45 AM Nov 20, 2021 | Team Udayavani |

ಬಂಟ್ವಾಳ: ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವ ನಿರ್ಧಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ರೈತರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ಮುಖಂಡ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.

Advertisement

ಒಂದು ವರ್ಷ ಕಾಲ ಈ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ಆನ್ನದಾತರಿಗೆ ಕೊನೆಗೂ ಜಯ ಸಿಕ್ಕಿದೆ. ಈ ಕಾಯ್ದೆ ವಿರುದ್ಧ ಅಭೂತಪೂರ್ವ ಹೋರಾಟ ಮಾಡಿರುವ ಮಣ್ಣಿನ ಮಕ್ಕಳಿಗೆ ಅಭಿನಂದನೆ ಸಲ್ಲಿಸುವುದಾಗಿ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಭುತ್ವಕ್ಕೆ ಸಂದ ಜಯ
ಕೇಂದ್ರ ಸರಕಾರ ಮೂರು ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆದಿರುವುದು ಪ್ರಜಾಪ್ರಭುತ್ವಕ್ಕೆ ಸಂದ ಜಯ. ಕಾಂಗ್ರೆಸ್‌ ಇದನ್ನು ಸ್ವಾಗತಿಸುತ್ತದೆ. ಇದು ಪ್ರಧಾನಿ ಮೋದಿ ಸರಕಾರ ರೈತರ ಕಣ್ಣೊರೆಸುವ ರಾಜಕೀಯ ತಂತ್ರವಾಗಬಾರದು. ಮುಂದಿನ ಲೋಕ ಸಭಾ ಅಧಿವೇಶನದಲ್ಲಿ ಸಾಂವಿಧಾನಿಕ ಮಾನ್ಯತೆಯೊಂದಿಗೆ ಅಧಿಕೃತವಾಗಿ ರದ್ದುಗೊಳಿಸಬೇಕು.

ಇದನ್ನೂ ಓದಿ:ಸಮಾನ ನಾಗರಿಕ ಸಂಹಿತೆ ಜಾರಿ ಮಾಡಿ: ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

ರೈತ ಹೋರಾಟದಲ್ಲಿ 700ಕ್ಕೂ ಹೆಚ್ಚು ರೈತರು ಅಸುನೀಗಿದ್ದು, ಇವರ ಕುಟುಂಬಗಳಿಗೆ ಸರಕಾರ ಪರಿಹಾರ ನೀಡಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ,ಅಶೋಕ್‌ ಕುಮಾರ್‌ ಕೊಡವೂರು ಮತ್ತು ಜಿಲ್ಲಾ ಕಾಂಗ್ರೆಸ್‌ ವಕ್ತಾರ ಭಾಸ್ಕರ ರಾವ್‌ ಕಿದಿಯೂರು ಒತ್ತಾಯಿಸಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next