Advertisement

ಚಮೋಲಿ ಜಿಲ್ಲೆಯ ಮೋಟಾರ್ ವೇ ಬಳಿ ಭಾರಿ ಗುಡ್ಡ ಕುಸಿತ : ಸಂಚಾರ ಅಸ್ತವ್ಯಸ್ಥ

11:53 AM Aug 13, 2021 | Team Udayavani |

ಚಮೋಲಿ  : ಉತ್ತರಾಖಂಡದ ಚಮೋಲಿ ಜಿಲ್ಲೆಯ ಹೃಷಿಕೇಶ್ -ಬದರಿನಾಥ್ ರಾಷ್ಟ್ರೀಯ ಹೆದ್ದಾರಿಗೆ ಸಮೀಪವಿರುವ ಮೋಟಾರ್ ವೇ ಬಳಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದೆ.

Advertisement

ಕಳೆದ ಕೆಲವು ದಿನಗಳಿಂದ ಸುರುಯುತ್ತಿರುವ ಭಾರ ಮಳೆಯ ಕಾರಣದಿಂದಾಗಿ ಗುಟ್ ಕುಸಿತ ಉಂಟಾಗಿದ್ದು, ಭಾರಿ ಗಾತ್ರದ ಬಂಡೆ ಕಲ್ಲುಗಳು ಧರಾಶಾಯಿಯಾಗಿದೆ. ಈವರೆ‍ಗೆ ಯಾವುದೇ, ಸಾವು ನೋವು ಸಂಭವಿಸಿಲ್ಲ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಇದನ್ನೂ ಓದಿ : ಟ್ವೀಟರ್ ಬ್ಲಾಕ್ ಪ್ರಕರಣ : ಇದು ಪ್ರಜಾಪ್ರಭುತ್ವದ ಮೇಲೆ ವ್ಯವಸ್ಥಿತ ದಾಳಿ: ರಾಹುಲ್ ಸಿಡಿಮಿಡಿ

ಇನ್ನು, ಭಾರಿ ಪ್ರಮಾಣದ ಗುಡ್ಡ ಕುಸಿತ ಉಂಟಾಗಿರುವ ಕಾರಣದಿಂದಾಗಿ, ಹೆದ್ದಾರಿ ಸಂಪೂರ್ಣ ಅಸ್ತವ್ಯಸ್ಥಗೊಂಡಿದ್ದು, ಹೆದ್ದಾರಿಯನ್ನು ಬಂದ್ ಮಾಡಲಾಗಿದೆ ಎಂದು ಅಲ್ಲಿನ ಸ್ಥಳೀಯಾಡಳಿತ ಮಾಹಿತಿ ನೀಡಿದೆ.

ಹೃಷಿಕೇಶ್, ಡೆಹ್ರಾಡೂನ್ ಹಾಗೂ ಇತರ ಉತ್ತರಾಖಂಡ್ ನ ಇತರೆ ಪ್ರದೇಶಗಳಿಗೆ ಹೋಗುತ್ತಿದ್ದ ಪ್ರಯಾಣಿಕರು ಹೃಷಿಕೇಶ್ -ಬದರಿನಾಥ್ ರಾಷ್ಟ್ರೀಯ ಹೆದ್ದಾರಿಗೆ ಸಮೀಪವಿರುವ ಮೋಟಾರ್ ವೇ ಬಳಿ ಸಿಲುಕಿಕೊಂಡಿರುವುದಾಗಿ ವರದಿ ತಿಳಿಸಿದೆ.

Advertisement

ಹೆದ್ದಾರಿ ತೆರವುಗೊಳಿಸುವ ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಕಳೆದ ವಾರ, ಉತ್ತರಾಖಂಡದ ಜೋಶಿಮಠ ಗ್ರಾಮದಲ್ಲಿ ಭಾರೀ ಭೂಕುಸಿತ ಉಂಟಾಗಿ ಎನ್ ಟಿ ಪಿ ಸಿ ಯ ಸುರಂಗದ ಮೇಲೆ ನಿರ್ಮಿಸಲಾದ ಹೋಟೆಲ್ ಕುಸಿದಿತ್ತು.

ಇದನ್ನೂ ಓದಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 40,120 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ

Advertisement

Udayavani is now on Telegram. Click here to join our channel and stay updated with the latest news.

Next