Advertisement

ಜಿಲ್ಲಾಧಿಕಾರಿಗಳ ಜತೆ ಏರ್ಪಡಿಸಿದ್ದ ವಿಡಿಯೋ ಸಂವಾದ ದಿಡೀರ್ ಮೊಟಕು: BSY ನಡೆಗೆ ಆಕ್ರೋಶ

09:34 AM Oct 24, 2019 | Team Udayavani |

ಬೆಂಗಳೂರು: ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಏರ್ಪಡಿಸಲಾಗಿದ್ದ ವಿಡಿಯೋ ಸಂವಾದವನ್ನು ಅರ್ಧಕ್ಕೆ ಮೊಟಕುಗೊಳಿಸಿ ತೆರಳಿದ ಮುಖ್ಯಮಂತ್ರಿ ಯಡಿಯೂರಪ್ಪ ನಡೆಗೆ ತೀವ್ರ ಆಕ್ರೊಶ ವ್ಯಕ್ತವಾಗಿದೆ.

Advertisement

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆಯೋಜಿಸಿದ್ದ ವಿಡಿಯೋ ಸಂವಾದವನ್ನು ಕೇವಲ ಎರಡು ನಿಮಿಷಕ್ಕೆ ಸೀಮಿತಗೊಳಿಸಿ ಕಾನ್ಫರೆನ್ಸ್ ಹಾಲ್ ನಿಂದ ಬಿಜೆಪಿ ಕಚೇರಿಗೆ ದೌಡಾಯಿಸಿದ್ದಾರೆ.

ಪ್ರವಾಹ ಪರಿಸ್ಥಿತಿಯನ್ನು ಸಮರ್ಥ ವಾಗಿ ನಿಭಾಯಿಸುವಂತೆ ಜಿಲ್ಲಾಧಿಕಾರಿಗಳಿಗೆ ಎರಡು- ಮೂರು ನಿಮಿಷದಲ್ಲಿ ಸಲಹೆ ಕೊಟ್ಟು , ಬಿಜೆಪಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಲು ತೆರಳಿದ್ದಾರೆ.

ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ  ತಲೆದೋರಿದ್ದರೂ  ಸಮರ್ಪಕವಾಗಿ ಪರಿಹಾರ ಸೂಚಿಸದೆ ತೆರಳಿದ ಸಿಎಂ ನಡೆ ಇದೀಗ ಚರ್ಚೆಗೆ ಗ್ರಾಸವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next