Advertisement

ತಳ್ಳು ಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ದರೂ ಬದುಕದ ಪತ್ನಿ

01:13 AM Apr 06, 2022 | Team Udayavani |

ಬಲ್ಲಿಯಾ: ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿಯನ್ನು ವೃದ್ಧ ಪತಿ, ತಳ್ಳುಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ದಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದಿದೆ.

Advertisement

ವೃದ್ಧ ಪತ್ನಿಯನ್ನು ಕರೆದೊಯ್ಯುತ್ತಿರುವ ಫೋಟೋ ಎಲ್ಲೆಡೆ ಹರಿದಾಡಿದ್ದು, ಅದರ ಬಗ್ಗೆ ತನಿಖೆ ನಡೆಸಲು ಡಿಸಿಎಂ ಬೃಜೇಷ್‌ ಪಾಠಕ್‌ ಆದೇಶ ನೀಡಿದ್ದಾರೆ.

ಬಲ್ಲಿಯಾ ಜಿಲ್ಲೆಯ ಆಂದೌರ್‌ನ ಸಕುಲ್‌ ಪ್ರಜಾಪತಿ ಅವರ ಪತ್ನಿಯ ಆರೋಗ್ಯ ಹದಗೆಟ್ಟಿದ್ದರಿಂದ ಮಾ.28ರಂದು ಪತ್ನಿಯನ್ನು 4 ಕಿ.ಮೀ ದೂರದಲ್ಲಿದ್ದ ಆಸ್ಪತ್ರೆಗೆ ತಳ್ಳು ಗಾಡಿಯಲ್ಲಿ ಕರೆದುಕೊಂಡು ಹೋಗಿದ್ದಾರೆ. ಆ ಆಸ್ಪತ್ರೆಯಲ್ಲಿ, ರೋಗಿಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲು ಸೂಚಿಸಲಾಗಿದೆ.

ಇದನ್ನೂ ಓದಿ:ಹಾವೇರಿ : ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತು ಮಹಿಳೆ ಸಾವು, ವಿದ್ಯುತ್ ಕಂಬ, ಮರಗಳು ಧರೆಗೆ

15 ಕಿ.ಮೀ ದೂರವಿದ್ದ ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ಯಲು ಆಸ್ಪತ್ರೆಯು ಆ್ಯಂಬುಲೆನ್ಸ್‌ ಸೌಲಭ್ಯವನ್ನೂ ಮಾಡಿಕೊಡದ ಹಿನ್ನೆಲೆ, ವೃದ್ಧ ಸುಮಾರು 4 ಗಂಟೆ ಹೊತ್ತು ಒದ್ದಾಡಿ ಮಿನಿ ಟ್ರಕ್‌ ಒಂದನ್ನು ವ್ಯವಸ್ಥೆ ಮಾಡಿದ್ದಾರೆ. ಆದರೆ ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುವಾಗ ವೃದ್ಧೆ ಸಾವನ್ನಪ್ಪಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next