Advertisement

ಜೀವದ ಹಂಗು ತೊರೆದು ಕಳ್ಳನನ್ನು ಹಿಡಿದ ಪೊಲೀಸ್ ಪೇದೆಗೆ ಭಾರಿ ಪ್ರಶಂಸೆ

04:07 PM Nov 25, 2022 | Team Udayavani |

ನವದೆಹಲಿ : ದೆಹಲಿ ಪೊಲೀಸ್ ಪೇದೆಯೊಬ್ಬರು ಏಕಾಂಗಿಯಾಗಿ ಸರಗಳ್ಳನನ್ನು ಹಿಡಿದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Advertisement

ದೆಹಲಿಯ ಶಹಬಾದ್ ಡೈರಿ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಸತ್ಯೇಂದ್ರ ಅವರೇ ಈ ಸಾಹಸದ ಕೆಲಸ ಮಾಡಿದ ಪೊಲೀಸ್ ಪೇದೆ.

ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಕಳ್ಳನನ್ನು ಪೊಲೀಸ್ ಸಿಬಂಧಿ ಹಿಡಿಯುವ ಮೂಲಕ ಸುಮಾರು ಹನ್ನೊಂದು ಪ್ರಕರಣಗಳಿಗೆ ಬೇಕಾಗಿದ್ದ ಆರೋಪಿ ಸಿಕ್ಕಿಬಿದ್ದಂತಾಗಿದೆ.

ಕಾನ್‌ಸ್ಟೆಬಲ್ ಸತ್ಯೇಂದ್ರ ಅವರು ದೆಹಲಿ ನಗರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭ ಆರೋಪಿ ಎದುರಿನಿಂದ ಬೈಕ್ ನಲ್ಲಿ ಬರುತ್ತಿದ್ದ ಈ ವೇಳೆ ಪೊಲೀಸ್ ಸಿಬ್ಬಂದಿ ತನ್ನ ಬೈಕ್ ಕಳ್ಳನ ಬೈಕ್ ಗೆ ಅಡ್ಡ ಇಟ್ಟು ಹಿಡಿಯಲು ಮುಂದಾಗಿದ್ದಾರೆ ಈ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಈ ಆದರೆ ಪೊಲೀಸ್ ಸಿಬ್ಬಂದಿ ತನ್ನ ಜೀವದ ಹಂಗನ್ನು ತೊರೆದು ಕಳ್ಳನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಅಲ್ಲದೆ ಈತನ ಮೇಲೆ ಠಾಣೆಯಲ್ಲಿ ಸುಮಾರು ಹನ್ನೊಂದು ಪ್ರಕರಣಗಳು ದಾಖಲಾಗಿದ್ದು ಆರೋಪಿಯ ಬಂಧನದಿಂದ ಪೊಲೀಸರು ನಿಟ್ಟುಸಿರು ಬಿಡುವಂತಾಗಿದೆ.
ಇತ್ತ ಪೊಲೀಸ್ ಪೇದೆಯ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಲ್ಲದೆ, ಸಾರ್ವಜನಿಕರಿಂದಲೂ ಮೆಚ್ಚುಗೆಯನ್ನು ಗಳಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next