Advertisement

ಬೆಂಗಳೂರು: ಸೋಮವಾರ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದ್ದು, ಗೋಹತ್ಯೆ ನಿಷೇಧ ಕಾಯ್ದೆ, ಲವ್‌ ಜೆಹಾದ್‌ ನಿಷೇಧ ಮತ್ತು ರಾಜ್ಯದ ಭೂಸುಧಾರಣ ಮಸೂದೆಗಳು ಸದ್ದು ಮಾಡುವ ಸಾಧ್ಯತೆ ಇದೆ.

Advertisement

ಅಧಿವೇಶನ ಆರಂಭದ ಮುನ್ನಾ ದಿನವಾದ ರವಿವಾರ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪರಿಶೀಲನೆ ನಡೆಸಿದರು. ಕೊರೊನಾ ಹಿನ್ನೆಲೆಯಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಶಾಸಕರು ಮತ್ತು ಸಂಬಂಧ ಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮಾತ್ರ ವಿಧಾನಸಭೆಯ ಒಳಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಶಾಸಕರ ನಡುವೆ ಅಂತರ ಕಾಯ್ದುಕೊಳ್ಳಲು ಎರಡು ಆಸನಗಳ ನಡುವೆ ಫೈಬರ್‌ ವಿಭಾಜಕಗಳನ್ನು ಅಳವಡಿಸಲಾಗಿದೆ.

ಶಾಸಕರು ವಿಧಾನಸಭೆ ಪ್ರವೇಶಿಸುವುದಕ್ಕೆ ಮುನ್ನ ಸ್ಯಾನಿಟೈಸೇಶನ್‌ ಮತ್ತು ಥರ್ಮಲ್‌ ಸ್ಕ್ರೀನಿಂಗ್‌ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next