Advertisement

ರೈತವಿರೋಧಿ ನೀತಿ ಖಂಡಿಸಿ ನ.12ಕ್ಕೆ ವಿಧಾನಸೌಧ ಚಲೋ

06:05 AM Oct 23, 2018 | |

ಹಾವೇರಿ: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ರೈತವಿರೋಧಿ ನೀತಿ ಖಂಡಿಸಿ ನ.12ರಂದು ವಿಧಾನಸೌಧ ಚಲೋ ಹಾಗೂ ನ.30ರಂದು ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತಸಂಘ, ಹಸಿರುಸೇನೆ ರಾಜ್ಯಾಧ್ಯಕ್ಷ ಕೆ.ಟಿ. ಗಂಗಾಧರ ತಿಳಿಸಿದರು.

Advertisement

ಸುದ್ದಿಗೋಷ್ಠಿ ನಡೆಸಿದ ಅವರು, ನ.12ರಂದು ಬೆಂಗಳೂರಿನಲ್ಲಿ ಒಂದು ದಿನ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರವನ್ನು ಎಚ್ಚರಿಸಲಾಗುವುದು. 10 ರಿಂದ 15 ಸಾವಿರ ರೈತರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ರೀತಿ ನ.30ರಂದು ದೆಹಲಿಯಲ್ಲಿ ರಾಷ್ಟ್ರಮಟ್ಟದ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುವುದು. ದೇಶದ ವಿವಿಧ ರಾಜ್ಯಗಳ ರೈತ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿವೆ ಎಂದರು. ರೈತರ ಸಾಲ ಮನ್ನಾ, ಕಬ್ಬು ಬೆಳೆಗಾರರಿಗೆ ಸೂಕ್ತ ಬೆಲೆ, ತೊಗರಿ, ಮೆಕ್ಕೆಜೋಳ ಖರೀದಿ ಬೆಂಬಲ ಬೆಲೆ ಸೇರಿದಂತೆ ವಿವಿಧ ವಿಷಯಗಳ ಕುರಿತು ರಾಜ್ಯ, ಕೇಂದ್ರದ ಮೇಲೆ ಒತ್ತಡ ಹೇರಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next