Advertisement
2018 ಮಾ.7ರಂದು ಲೋಕಾಯುಕ್ತ ಪಿ. ವಿಶ್ವನಾಥ್ ಶೆಟ್ಟಿ ಅವರ ಮೇಲೆ ವ್ಯಕ್ತಿಯೊಬ್ಬ ಚಾಕುವಿನಿಂದ ಗಂಭೀರ ವಾಗಿ ಹಲ್ಲೆ ನಡೆಸಿದ್ದ. ಈ ಘಟನೆ ಬಳಿಕ ಎಚ್ಚೆತ್ತುಕೊಂಡ ನಗರ ಪೊಲೀಸ್ ಆಯುಕ್ತರು, ವಿಧಾನಸೌಧ, ವಿಕಾಸಸೌಧ, ಶಾಸಕರ ಭವನ, ಬಹುಮಹಡಿ ಕಟ್ಟಡ, ರಾಜ್ಯ ಮಾನವ ಹಕ್ಕುಗಳ ಆಯೋಗ ಹಾಗೂ ಮಾಹಿತಿ ಸೌಧ ಕಟ್ಟಡಗಳ ಭದ್ರತೆ ಮೇಲ್ದರ್ಜೆಗೇ ರಿಸುವ ಕುರಿತು ಅಗತ್ಯ ಕ್ರಮಕೈಗೊಳ್ಳಬೇಕು ಹಾಗೂ ಭದ್ರತಾ ಉಪಕರಣಗಳ ಅಳವಡಿಕೆಗೆ ಅನುಮತಿ ನೀಡಬೇಕೆಂದು ಮನವಿ ಮಾಡಿದ್ದರು.
Related Articles
Advertisement
ಸಿಬ್ಬಂದಿ ಕೂಡ ನಿಯೋಜನೆ: ಈ ಕುರಿತು “ಉದಯವಾಣಿ’ಗೆ ಪ್ರತಿಕ್ರಿಯೆ ನೀಡಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್, ಐತಿಹಾಸಿಕ ಕಟ್ಟಡಗಳ ಭದ್ರತಾ ವ್ಯವಸ್ಥೆಯನ್ನು ಸರ್ಕಾರ ಮೇಲ್ದರ್ಜೆಗೇರಿಸಿರುವುದು ಒಳ್ಳೆಯ ಬೆಳವಣಿಗೆ. ಸರ್ಕಾರದ ಆದೇಶದನ್ವಯ ಬ್ಯಾಗೇಜ್ ಸ್ಕ್ಯಾನರ್ ಹಾಗೂ ಇತರೆ ಉಪಕರಣಗಳ ಅಳವಡಿಕೆ ಮಾತ್ರವಲ್ಲ, ಹಂತ-ಹಂತವಾಗಿ ಪೊಲೀಸ್ ಸಿಬ್ಬಂದಿ ಕೂಡ ನಿಯೋಜಿಸಲಾಗುವುದು. ಅಗತ್ಯ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗುವುದು ಎಂದರು.
ಭದ್ರತಾ ಲೋಪದ ಪ್ರಕರಣಗಳು* 2018 ಮಾ.7ರಂದು ಬಹುಮಹಡಿ ಕಟ್ಟಡದಲ್ಲಿರುವ ಲೋಕಾಯುಕ್ತ ಸಂಸ್ಥೆಯ ಲೋಕಾಯುಕ್ತ ನ್ಯಾ. ಪಿ.ವಿಶ್ವನಾಥ್ ಶೆಟ್ಟಿ ಅವರ ಮೇಲೆ ತೇಜರಾಜ್ ಎಂಬಾತ ಚಾಕುವಿನಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದ. ಈ ಘಟನೆ ಬಳಿಕ ಲೋಕಾಯುಕ್ತ ಸಂಸ್ಥೆಯಲ್ಲಿ ಡಿಎಫ್ಎಂಡಿ ಅಳವಡಿಸಿದ್ದು, ಇಬ್ಬರು ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಅಲ್ಲದೆ, ಸಿಸಿ ಕ್ಯಾಮೆರಾ ಹಾಗೂ ಸಂದರ್ಶಕರ ನೋಂದಣಿ ಪುಸ್ತಕ ಇಡಲಾಗಿತ್ತು. * 2019 ಜನವರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವ ಸಿ.ಪುಟ್ಟರಂಗ ಶೆಟ್ಟಿ ಅವರ ಕಚೇರಿಯಲ್ಲಿ ಬೆರಳಚ್ಚು ಕೆಲಸ ಮಾಡುತ್ತಿದ್ದ ಮೋಹನ್ ಎಂಬಾತ ದಾಖಲೆ ಇಲ್ಲದ 25.76 ಲಕ್ಷ ರೂ. ಕೊಂಡೊಯ್ಯುವಾಗ ಸಿಕ್ಕಿ ಬಿದ್ದಿದ್ದ. ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ ಭದ್ರತೆಯಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಎಚ್ಚರವಹಿಸಲಾಗುವುದು. ಜತೆಗೆ ಭದ್ರತೆ ಬಗ್ಗೆ ನೀಲನಕ್ಷೆ ಸಿದ್ಧಪಡಿಸಿ ಕ್ರಮಕೈಗೊಳ್ಳಲಾಗುವುದು.
-ಭಾಸ್ಕರ್ರಾವ್, ನಗರ ಪೊಲೀಸ್ ಆಯುಕ್ತ * ಮೋಹನ್ ಭದ್ರಾವತಿ